ದೇಶ- ವಿದೇಶ

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ ಸಿಲುಕಿಕೊಂಡಿದ್ದಾರೆ.

ಮಂಗಳವಾರ ರಾತ್ರಿ (ಮಾ.24) ಚುಂಗ್‌ಥಾಂಗ್-ಲಾಚೆನ್ ಮಾರ್ಗದ ಹಲವೆಡೆ ಭೂಕುಸಿತ ಸಂಭವಿಸಿದೆ. ಇದರಿಂದ ಲಾಚೆನ್‌ಗೆ ತೆರಳುತ್ತಿದ್ದ ಪ್ರವಾಸಿಗರು ಮಧ್ಯದಲ್ಲಿ ಸಿಲುಕಿಕೊಂಡಿದ್ದಾರೆ. ಸಂಕಷ್ಟಕ್ಕೆ ಸಿಲುಕಿದ ಪ್ರವಾಸಿಗರಿಗೆ ಚುಂಗ್‌ಥಾಂಗ್‌ನಲ್ಲಿರುವ ಐಟಿಬಿಪಿ ಶಿಬಿರ ಮತ್ತು ಗುರುದ್ವಾರದಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಮಂಗನ್ ಜಿಲ್ಲಾಧಿಕಾರಿ ಅನಂತ್ ಜೈನ್ ಮಾಹಿತಿ ನೀಡಿದ್ದಾರೆ.

ರಸ್ತೆಗಳಲ್ಲಿ ಬಿದ್ದಿರುವ ಕಲ್ಲು ಹಾಗೂ ಮಣ್ಣಿನ ತೆರವು ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಭೂಕುಸಿತದ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೇ ಹವಾಮಾನ ಪರಿಸ್ಥಿತಿಗಳನ್ನು ಅವಲಂಬಿಸಿ ಈ ಮಾರ್ಗಗಳು ಸಂಚಾರಕ್ಕೆ ಸುರಕ್ಷಿತವೆಂದು ಘೋಷಿಸಿದ ನಂತರ ಪ್ರವಾಸಿಗರಿಗೆ ಅವಕಾಶ ನೀಡಬಹುದು ಎಂದು ಅವರು ಹೇಳಿದ್ದಾರೆ.

ಈ ಪ್ರದೇಶದಲ್ಲಿ ನಿರಂತರ ಮಳೆಯಾಗುವುದರಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಭಾರೀ ಹಿಮಪಾತದಿಂದಾಗಿ ತ್ಸೊಮ್ಗೊ ಸರೋವರ ಮತ್ತು ನಾಥುಲಾದಂತಹ ಪ್ರಮುಖ ಪ್ರವಾಸಿ ತಾಣಗಳು ಮುಚ್ಚಲ್ಪಟ್ಟಿವೆ.

2023ರ ಹಿಮನದಿ ಸರೋವರ ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾದ ಲಾಚೆನ್ ಮಾರ್ಗವು ಇತ್ತೀಚೆಗೆ ಮಾರ್ಚ್ 9 ರಂದು ಮತ್ತೆ ತೆರೆಯಲ್ಪಟ್ಟಿತ್ತು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago