ದೇಶ- ವಿದೇಶ

ರಾಜ್ಯಗಳ ಮೇಲೆ ಭಾಷೆ ಹೇರುತ್ತಿಲ್ಲ : ಸಚಿವ ಧರ್ಮೇಂದ್ರ ಪ್ರಧಾನ್‌

ಚೆನ್ನೆ : ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುತ್ತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಐಐಟಿ ಮದ್ರಾಸ್‌ನಲ್ಲಿ ನಡೆದ ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ ೨೦೨೫ ರಲ್ಲಿ ಭಾಗವಹಿಸಿದ ಅವರು, ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರವು ರಾಜ್ಯಗಳ ಮೇಲೆ ‘ತ್ರಿಭಾಷಾ ನೀತಿ’ನ್ನು ಹೇರುತ್ತಿದೆ ಎನ್ನುವುದು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದರು.

ನಾವು ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುತ್ತಿಲ್ಲ. ೧ ಮತ್ತು ೨ನೇ ತರಗತಿಗಳಿಗೆ ದ್ವಿಭಾಷಾ ಸೂತ್ರ ಇರುತ್ತದೆ. ಇದರಲ್ಲಿ ಒಂದು ಮಾತೃಭಾಷೆ. ತಮಿಳುನಾಡಿನಲ್ಲಾದರೆ ಇದು ತಮಿಳು ಭಾಷೆಯಾಗಿರುತ್ತದೆ. ಇದರ ಜತೆಗೆ ನಿಮ್ಮ ಆಯ್ಕೆಯ ಇನ್ನೊಂದು ಭಾಷೆಯನ್ನು ಕಲಿಸಬಹುದು ಎಂದರು. ೬ರಿಂದ ೧೦ನೇ ತರಗತಿವರೆಗೆ ‘ತ್ರಿಭಾಷಾ ಸೂತ್ರ’ ಇರುತ್ತದೆ. ಒಂದು ಮಾತೃಭಾಷೆಯಾದರೆ, ಇನ್ನೆರಡು ಆಯ್ಕೆಯ ಭಾಷೆಯಾಗಿರುತ್ತವೆ ಎಂದು ಪ್ರಧಾನ್ ಸ್ಪಷ್ಟಪಡಿಸಿದರು.

ಉತ್ತರ ಪ್ರದೇಶದಂತ ರಾಜ್ಯಗಳಲ್ಲಿ ತ್ರಿಭಾಷಾ ಸೂತ್ರವನ್ನು ಹೇಗೆ ಜಾರಿಗೊಳಿಸುತ್ತೀರಿ ಎಂಬ ಪ್ರಶ್ನೆಗೆ, ನಾವು ಆ ರಾಜ್ಯದಲ್ಲೂ ಈ ಸೂತ್ರ ಜಾರಿಗೊಳಿಸುತ್ತೇವೆ. ವಿದ್ಯಾರ್ಥಿಯೊಬ್ಬ ಹಿಂದಿಯನ್ನು ಮಾತೃಭಾಷೆಯಾಗಿ, ನಂತರ ಮರಾಠಿಯನ್ನು ಬಳಿಕ ತಮಿಳನ್ನೂ ಕಲಿಯುತ್ತಾನೆ. ಉತ್ತರ ಪ್ರದೇಶದಲ್ಲಿ ಮೂರನೆಯ ಭಾಷೆಯಾಗಿ ‘ತಮಿಳು’ ಕಲಿಯಲೂ ಅವಕಾಶವಿದೆ ಎಂದು ಅವರು ಹೇಳಿದರು.

ಭಾಷೆಗಳು ಯಾವಾಗಲೂ ಸಹಾಯಕವಾಗಿರುತ್ತವೆ. ರಾಜಕೀಯವಾಗಿ ಸಂಕುಚಿತ ಆಲೋಚನೆಗಳನ್ನು ಹೊಂದಿರುವವರು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ ಎಂದ ಪ್ರಧಾನ್, ಹಲವು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿಗೂ ಮುನ್ನವೇ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಲು ಹೊರಟಿವೆ ಎಂದರು.

ಆಂದೋಲನ ಡೆಸ್ಕ್

Recent Posts

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

21 mins ago

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

27 mins ago

ಎಸ್‌ಸಿಪಿ,ಟಿಎಸ್‌ಪಿ ಅನುದಾನ ಗ್ಯಾರಂಟಿಗೆ ಬಳಕೆ : ಕಾಂಗ್ರೆಸ್‌ನಲ್ಲೇ ಅಸಮಾಧಾನ

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…

49 mins ago

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

1 hour ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

2 hours ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

3 hours ago