ಚೆನ್ನೆ : ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುತ್ತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಐಐಟಿ ಮದ್ರಾಸ್ನಲ್ಲಿ ನಡೆದ ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ ೨೦೨೫ ರಲ್ಲಿ ಭಾಗವಹಿಸಿದ ಅವರು, ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರವು ರಾಜ್ಯಗಳ ಮೇಲೆ ‘ತ್ರಿಭಾಷಾ ನೀತಿ’ನ್ನು ಹೇರುತ್ತಿದೆ ಎನ್ನುವುದು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದರು.
ನಾವು ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುತ್ತಿಲ್ಲ. ೧ ಮತ್ತು ೨ನೇ ತರಗತಿಗಳಿಗೆ ದ್ವಿಭಾಷಾ ಸೂತ್ರ ಇರುತ್ತದೆ. ಇದರಲ್ಲಿ ಒಂದು ಮಾತೃಭಾಷೆ. ತಮಿಳುನಾಡಿನಲ್ಲಾದರೆ ಇದು ತಮಿಳು ಭಾಷೆಯಾಗಿರುತ್ತದೆ. ಇದರ ಜತೆಗೆ ನಿಮ್ಮ ಆಯ್ಕೆಯ ಇನ್ನೊಂದು ಭಾಷೆಯನ್ನು ಕಲಿಸಬಹುದು ಎಂದರು. ೬ರಿಂದ ೧೦ನೇ ತರಗತಿವರೆಗೆ ‘ತ್ರಿಭಾಷಾ ಸೂತ್ರ’ ಇರುತ್ತದೆ. ಒಂದು ಮಾತೃಭಾಷೆಯಾದರೆ, ಇನ್ನೆರಡು ಆಯ್ಕೆಯ ಭಾಷೆಯಾಗಿರುತ್ತವೆ ಎಂದು ಪ್ರಧಾನ್ ಸ್ಪಷ್ಟಪಡಿಸಿದರು.
ಉತ್ತರ ಪ್ರದೇಶದಂತ ರಾಜ್ಯಗಳಲ್ಲಿ ತ್ರಿಭಾಷಾ ಸೂತ್ರವನ್ನು ಹೇಗೆ ಜಾರಿಗೊಳಿಸುತ್ತೀರಿ ಎಂಬ ಪ್ರಶ್ನೆಗೆ, ನಾವು ಆ ರಾಜ್ಯದಲ್ಲೂ ಈ ಸೂತ್ರ ಜಾರಿಗೊಳಿಸುತ್ತೇವೆ. ವಿದ್ಯಾರ್ಥಿಯೊಬ್ಬ ಹಿಂದಿಯನ್ನು ಮಾತೃಭಾಷೆಯಾಗಿ, ನಂತರ ಮರಾಠಿಯನ್ನು ಬಳಿಕ ತಮಿಳನ್ನೂ ಕಲಿಯುತ್ತಾನೆ. ಉತ್ತರ ಪ್ರದೇಶದಲ್ಲಿ ಮೂರನೆಯ ಭಾಷೆಯಾಗಿ ‘ತಮಿಳು’ ಕಲಿಯಲೂ ಅವಕಾಶವಿದೆ ಎಂದು ಅವರು ಹೇಳಿದರು.
ಭಾಷೆಗಳು ಯಾವಾಗಲೂ ಸಹಾಯಕವಾಗಿರುತ್ತವೆ. ರಾಜಕೀಯವಾಗಿ ಸಂಕುಚಿತ ಆಲೋಚನೆಗಳನ್ನು ಹೊಂದಿರುವವರು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ ಎಂದ ಪ್ರಧಾನ್, ಹಲವು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿಗೂ ಮುನ್ನವೇ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಲು ಹೊರಟಿವೆ ಎಂದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…