ಚೆನ್ನೆ : ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುತ್ತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಐಐಟಿ ಮದ್ರಾಸ್ನಲ್ಲಿ ನಡೆದ ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ ೨೦೨೫ ರಲ್ಲಿ ಭಾಗವಹಿಸಿದ ಅವರು, ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರವು ರಾಜ್ಯಗಳ ಮೇಲೆ ‘ತ್ರಿಭಾಷಾ ನೀತಿ’ನ್ನು ಹೇರುತ್ತಿದೆ ಎನ್ನುವುದು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದರು.
ನಾವು ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುತ್ತಿಲ್ಲ. ೧ ಮತ್ತು ೨ನೇ ತರಗತಿಗಳಿಗೆ ದ್ವಿಭಾಷಾ ಸೂತ್ರ ಇರುತ್ತದೆ. ಇದರಲ್ಲಿ ಒಂದು ಮಾತೃಭಾಷೆ. ತಮಿಳುನಾಡಿನಲ್ಲಾದರೆ ಇದು ತಮಿಳು ಭಾಷೆಯಾಗಿರುತ್ತದೆ. ಇದರ ಜತೆಗೆ ನಿಮ್ಮ ಆಯ್ಕೆಯ ಇನ್ನೊಂದು ಭಾಷೆಯನ್ನು ಕಲಿಸಬಹುದು ಎಂದರು. ೬ರಿಂದ ೧೦ನೇ ತರಗತಿವರೆಗೆ ‘ತ್ರಿಭಾಷಾ ಸೂತ್ರ’ ಇರುತ್ತದೆ. ಒಂದು ಮಾತೃಭಾಷೆಯಾದರೆ, ಇನ್ನೆರಡು ಆಯ್ಕೆಯ ಭಾಷೆಯಾಗಿರುತ್ತವೆ ಎಂದು ಪ್ರಧಾನ್ ಸ್ಪಷ್ಟಪಡಿಸಿದರು.
ಉತ್ತರ ಪ್ರದೇಶದಂತ ರಾಜ್ಯಗಳಲ್ಲಿ ತ್ರಿಭಾಷಾ ಸೂತ್ರವನ್ನು ಹೇಗೆ ಜಾರಿಗೊಳಿಸುತ್ತೀರಿ ಎಂಬ ಪ್ರಶ್ನೆಗೆ, ನಾವು ಆ ರಾಜ್ಯದಲ್ಲೂ ಈ ಸೂತ್ರ ಜಾರಿಗೊಳಿಸುತ್ತೇವೆ. ವಿದ್ಯಾರ್ಥಿಯೊಬ್ಬ ಹಿಂದಿಯನ್ನು ಮಾತೃಭಾಷೆಯಾಗಿ, ನಂತರ ಮರಾಠಿಯನ್ನು ಬಳಿಕ ತಮಿಳನ್ನೂ ಕಲಿಯುತ್ತಾನೆ. ಉತ್ತರ ಪ್ರದೇಶದಲ್ಲಿ ಮೂರನೆಯ ಭಾಷೆಯಾಗಿ ‘ತಮಿಳು’ ಕಲಿಯಲೂ ಅವಕಾಶವಿದೆ ಎಂದು ಅವರು ಹೇಳಿದರು.
ಭಾಷೆಗಳು ಯಾವಾಗಲೂ ಸಹಾಯಕವಾಗಿರುತ್ತವೆ. ರಾಜಕೀಯವಾಗಿ ಸಂಕುಚಿತ ಆಲೋಚನೆಗಳನ್ನು ಹೊಂದಿರುವವರು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ ಎಂದ ಪ್ರಧಾನ್, ಹಲವು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿಗೂ ಮುನ್ನವೇ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಲು ಹೊರಟಿವೆ ಎಂದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…