ಚೆನ್ನೆ : ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುತ್ತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಐಐಟಿ ಮದ್ರಾಸ್ನಲ್ಲಿ ನಡೆದ ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ ೨೦೨೫ ರಲ್ಲಿ ಭಾಗವಹಿಸಿದ ಅವರು, ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರವು ರಾಜ್ಯಗಳ ಮೇಲೆ ‘ತ್ರಿಭಾಷಾ ನೀತಿ’ನ್ನು ಹೇರುತ್ತಿದೆ ಎನ್ನುವುದು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದರು.
ನಾವು ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುತ್ತಿಲ್ಲ. ೧ ಮತ್ತು ೨ನೇ ತರಗತಿಗಳಿಗೆ ದ್ವಿಭಾಷಾ ಸೂತ್ರ ಇರುತ್ತದೆ. ಇದರಲ್ಲಿ ಒಂದು ಮಾತೃಭಾಷೆ. ತಮಿಳುನಾಡಿನಲ್ಲಾದರೆ ಇದು ತಮಿಳು ಭಾಷೆಯಾಗಿರುತ್ತದೆ. ಇದರ ಜತೆಗೆ ನಿಮ್ಮ ಆಯ್ಕೆಯ ಇನ್ನೊಂದು ಭಾಷೆಯನ್ನು ಕಲಿಸಬಹುದು ಎಂದರು. ೬ರಿಂದ ೧೦ನೇ ತರಗತಿವರೆಗೆ ‘ತ್ರಿಭಾಷಾ ಸೂತ್ರ’ ಇರುತ್ತದೆ. ಒಂದು ಮಾತೃಭಾಷೆಯಾದರೆ, ಇನ್ನೆರಡು ಆಯ್ಕೆಯ ಭಾಷೆಯಾಗಿರುತ್ತವೆ ಎಂದು ಪ್ರಧಾನ್ ಸ್ಪಷ್ಟಪಡಿಸಿದರು.
ಉತ್ತರ ಪ್ರದೇಶದಂತ ರಾಜ್ಯಗಳಲ್ಲಿ ತ್ರಿಭಾಷಾ ಸೂತ್ರವನ್ನು ಹೇಗೆ ಜಾರಿಗೊಳಿಸುತ್ತೀರಿ ಎಂಬ ಪ್ರಶ್ನೆಗೆ, ನಾವು ಆ ರಾಜ್ಯದಲ್ಲೂ ಈ ಸೂತ್ರ ಜಾರಿಗೊಳಿಸುತ್ತೇವೆ. ವಿದ್ಯಾರ್ಥಿಯೊಬ್ಬ ಹಿಂದಿಯನ್ನು ಮಾತೃಭಾಷೆಯಾಗಿ, ನಂತರ ಮರಾಠಿಯನ್ನು ಬಳಿಕ ತಮಿಳನ್ನೂ ಕಲಿಯುತ್ತಾನೆ. ಉತ್ತರ ಪ್ರದೇಶದಲ್ಲಿ ಮೂರನೆಯ ಭಾಷೆಯಾಗಿ ‘ತಮಿಳು’ ಕಲಿಯಲೂ ಅವಕಾಶವಿದೆ ಎಂದು ಅವರು ಹೇಳಿದರು.
ಭಾಷೆಗಳು ಯಾವಾಗಲೂ ಸಹಾಯಕವಾಗಿರುತ್ತವೆ. ರಾಜಕೀಯವಾಗಿ ಸಂಕುಚಿತ ಆಲೋಚನೆಗಳನ್ನು ಹೊಂದಿರುವವರು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ ಎಂದ ಪ್ರಧಾನ್, ಹಲವು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿಗೂ ಮುನ್ನವೇ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಲು ಹೊರಟಿವೆ ಎಂದರು.
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…