ದೇಶ- ವಿದೇಶ

ರಾಜ್ಯಗಳ ಮೇಲೆ ಭಾಷೆ ಹೇರುತ್ತಿಲ್ಲ : ಸಚಿವ ಧರ್ಮೇಂದ್ರ ಪ್ರಧಾನ್‌

ಚೆನ್ನೆ : ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುತ್ತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಐಐಟಿ ಮದ್ರಾಸ್‌ನಲ್ಲಿ ನಡೆದ ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ ೨೦೨೫ ರಲ್ಲಿ ಭಾಗವಹಿಸಿದ ಅವರು, ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರವು ರಾಜ್ಯಗಳ ಮೇಲೆ ‘ತ್ರಿಭಾಷಾ ನೀತಿ’ನ್ನು ಹೇರುತ್ತಿದೆ ಎನ್ನುವುದು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದರು.

ನಾವು ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುತ್ತಿಲ್ಲ. ೧ ಮತ್ತು ೨ನೇ ತರಗತಿಗಳಿಗೆ ದ್ವಿಭಾಷಾ ಸೂತ್ರ ಇರುತ್ತದೆ. ಇದರಲ್ಲಿ ಒಂದು ಮಾತೃಭಾಷೆ. ತಮಿಳುನಾಡಿನಲ್ಲಾದರೆ ಇದು ತಮಿಳು ಭಾಷೆಯಾಗಿರುತ್ತದೆ. ಇದರ ಜತೆಗೆ ನಿಮ್ಮ ಆಯ್ಕೆಯ ಇನ್ನೊಂದು ಭಾಷೆಯನ್ನು ಕಲಿಸಬಹುದು ಎಂದರು. ೬ರಿಂದ ೧೦ನೇ ತರಗತಿವರೆಗೆ ‘ತ್ರಿಭಾಷಾ ಸೂತ್ರ’ ಇರುತ್ತದೆ. ಒಂದು ಮಾತೃಭಾಷೆಯಾದರೆ, ಇನ್ನೆರಡು ಆಯ್ಕೆಯ ಭಾಷೆಯಾಗಿರುತ್ತವೆ ಎಂದು ಪ್ರಧಾನ್ ಸ್ಪಷ್ಟಪಡಿಸಿದರು.

ಉತ್ತರ ಪ್ರದೇಶದಂತ ರಾಜ್ಯಗಳಲ್ಲಿ ತ್ರಿಭಾಷಾ ಸೂತ್ರವನ್ನು ಹೇಗೆ ಜಾರಿಗೊಳಿಸುತ್ತೀರಿ ಎಂಬ ಪ್ರಶ್ನೆಗೆ, ನಾವು ಆ ರಾಜ್ಯದಲ್ಲೂ ಈ ಸೂತ್ರ ಜಾರಿಗೊಳಿಸುತ್ತೇವೆ. ವಿದ್ಯಾರ್ಥಿಯೊಬ್ಬ ಹಿಂದಿಯನ್ನು ಮಾತೃಭಾಷೆಯಾಗಿ, ನಂತರ ಮರಾಠಿಯನ್ನು ಬಳಿಕ ತಮಿಳನ್ನೂ ಕಲಿಯುತ್ತಾನೆ. ಉತ್ತರ ಪ್ರದೇಶದಲ್ಲಿ ಮೂರನೆಯ ಭಾಷೆಯಾಗಿ ‘ತಮಿಳು’ ಕಲಿಯಲೂ ಅವಕಾಶವಿದೆ ಎಂದು ಅವರು ಹೇಳಿದರು.

ಭಾಷೆಗಳು ಯಾವಾಗಲೂ ಸಹಾಯಕವಾಗಿರುತ್ತವೆ. ರಾಜಕೀಯವಾಗಿ ಸಂಕುಚಿತ ಆಲೋಚನೆಗಳನ್ನು ಹೊಂದಿರುವವರು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ ಎಂದ ಪ್ರಧಾನ್, ಹಲವು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿಗೂ ಮುನ್ನವೇ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಲು ಹೊರಟಿವೆ ಎಂದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

46 mins ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

1 hour ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

14 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

15 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

15 hours ago