ಹೈದರಾಬಾದ್: ಅದಿರು ಪೂರೈಕೆಯಲ್ಲಿ ಸ್ಥಿರತೆಯನ್ನು ಸಮರ್ಥವಾಗಿ ಕಾಪಾಡಿಕೊಳ್ಳಬೇಕು ಹಾಗೂ ಉಕ್ಕು ತಯಾರಿಕಾ ಘಟಕಗಳಿಗೆ ಕಬ್ಬಿಣದ ಅದಿರು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ (NMDC) ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೈದರಾಬಾದ್ ನಲ್ಲಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವರು, ಬೃಹತ್ ಉಕ್ಕು ತಯಾರಿಕಾ ಘಟಕಗಳಿಗೆ ಅದಿರು ಪೂರೈಕೆ ಮಾಡುವಂತೆಯೇ ಮಧ್ಯಮ, ಸಣ್ಣ, ಅತಿ ಸಣ್ಣ ಉಕ್ಕು ತಯಾರಿಕಾ ಘಟಕಗಳಿಗೂ ಅದಿರು ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಘಟಕಗಳಿಗೆ ಅದಿರು ಪೂರೈಕೆಯಲ್ಲಿ ಸಮತೋಲನ, ಸ್ಥಿರತೆ ಕಾಪಾಡಿಕೊಂಡರೆ ಹೆಚ್ಚೆಚ್ಚು ಉದ್ಯೋಗ ಸೃಷ್ಟಿ ಮಾಡಬಹುದು. ಆ ಮೂಲಕ ಉಕ್ಕು ವಲಯದಿಂದ ಒಟ್ಟು ದೇಶೀಯ ಉತ್ಪನ್ನಕ್ಕೆ (GDP) ದೊಡ್ಡ ಕೊಡುಗೆ ನೀಡಬಹುದು. ಇದುವೇ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕನಸು ಎಂದು ಅಧಿಕಾರಿಗಳಿಗೆ ಹೇಳಿದರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು.
2024ಕ್ಕೆ ವಾರ್ಷಿಕ 100 ದಶಲಕ್ಷ ಟನ್ ಕಬ್ಬಿಣದ ಅದಿರು ಹೊರ ತೆಗೆಯುವ ನಿಗಮದ ಗುರಿಯ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು; ಗಣಿಗಾರಿಕೆಯನ್ನು ಇನ್ನೂ ಪರಿಣಾಮಕಾರಿಯಾಗಿ ಮಾಡುವ ಮೂಲಕ ಅದಿರು ಉತ್ಪಾದನೆಯಲ್ಲಿ ಹೆಚ್ಚಳ ಸಾಧಿಸಿ. ವಾರ್ಷಿಕ 300 ದಶಲಕ್ಷ ಟನ್ ಉಕ್ಕು ತಯಾರಿಸುವ ಗುರಿಯನ್ನು ಪ್ರಧಾನಿಗಳು ನೀಡಿದ್ದಾರೆ. ಅದನ್ನು ದುಪ್ಪಟ್ಟು ಮಾಡುವ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ ಕೆಲಸ ಮಾಡಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆಚ್ಚು ಪ್ರಮಾಣದಲ್ಲಿ ಗಣಿಗಾರಿಕೆಯನ್ನು ಮಾಡಬೇಕು, ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಅರಣ್ಯ ಬೆಳೆಸಬೇಕು ಎಂದು ಅಧಿಕಾರಿಗಳಿಗೆ ನೇರವಾಗಿ ಹೇಳಿದ ಸಚಿವರು; ಗಣಿಗಾರಿಕೆ, ಪೂರೈಕೆ ಹಾಗೂ ಉಕ್ಕು ತಯಾರಿಕೆಯ ಸರಪಳಿಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದರು.
ಕಬ್ಬಿಣ, ಚಿನ್ನ, ವಜ್ರದ ಗಣಿಗಾರಿಕೆ ನಡೆಸುತ್ತಿರುವ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ ಸಾಧನೆಯ ಪಕ್ಷಿನೋಟ ವೀಕ್ಷಿಸಿದ ಸಚಿವರು, ಕೇಂದ್ರ ಸರ್ಕಾರದಿಂದ ಎಲ್ಲಾ ಸಹಕಾರವೂ ಇರುತ್ತದೆ ಎಂದು ಸಚಿವರು ಭರವಸೆ ನೀಡಿದರು.
ಪ್ರಧಾನಿಗಳ ಮಾರ್ಗದರ್ಶನದೊಂದಿಗೆ ಅವರೇ ನಿಗದಿ ಮಾಡಿರುವ ಗುರಿಯನ್ನು ಮುಟ್ಟಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ಹೇಳಿದರು.
ನಿಗಮದ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಅಮಿತ್ವ ಮುಖರ್ಜಿ ಅವರು ನಿಗಮದ ಕಾರ್ಯ ಚಟುವಟಿಕೆ ಹಾಗೂ ಇನ್ನಿತರೆ ವಿವರಗಳ ಬಗ್ಗೆ ಸಚಿವರಿಗೆ ಪ್ರಾತ್ಯಕ್ಷಿಕೆ ನೀಡಿದರು.
ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ರಾಜ್ಯ ಸಚಿವರಾದ ಭೂಪತಿರಾಜು ಶ್ರೀನಿವಾಸ ವರ್ಮ ಸೇರಿ ನಿಗಮದ ವಿವಿಧ ನಿರ್ದೇಶಕರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…