ಹೈದರಾಬಾದ್: ಅದಿರು ಪೂರೈಕೆಯಲ್ಲಿ ಸ್ಥಿರತೆಯನ್ನು ಸಮರ್ಥವಾಗಿ ಕಾಪಾಡಿಕೊಳ್ಳಬೇಕು ಹಾಗೂ ಉಕ್ಕು ತಯಾರಿಕಾ ಘಟಕಗಳಿಗೆ ಕಬ್ಬಿಣದ ಅದಿರು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ (NMDC) ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೈದರಾಬಾದ್ ನಲ್ಲಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವರು, ಬೃಹತ್ ಉಕ್ಕು ತಯಾರಿಕಾ ಘಟಕಗಳಿಗೆ ಅದಿರು ಪೂರೈಕೆ ಮಾಡುವಂತೆಯೇ ಮಧ್ಯಮ, ಸಣ್ಣ, ಅತಿ ಸಣ್ಣ ಉಕ್ಕು ತಯಾರಿಕಾ ಘಟಕಗಳಿಗೂ ಅದಿರು ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಘಟಕಗಳಿಗೆ ಅದಿರು ಪೂರೈಕೆಯಲ್ಲಿ ಸಮತೋಲನ, ಸ್ಥಿರತೆ ಕಾಪಾಡಿಕೊಂಡರೆ ಹೆಚ್ಚೆಚ್ಚು ಉದ್ಯೋಗ ಸೃಷ್ಟಿ ಮಾಡಬಹುದು. ಆ ಮೂಲಕ ಉಕ್ಕು ವಲಯದಿಂದ ಒಟ್ಟು ದೇಶೀಯ ಉತ್ಪನ್ನಕ್ಕೆ (GDP) ದೊಡ್ಡ ಕೊಡುಗೆ ನೀಡಬಹುದು. ಇದುವೇ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕನಸು ಎಂದು ಅಧಿಕಾರಿಗಳಿಗೆ ಹೇಳಿದರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು.
2024ಕ್ಕೆ ವಾರ್ಷಿಕ 100 ದಶಲಕ್ಷ ಟನ್ ಕಬ್ಬಿಣದ ಅದಿರು ಹೊರ ತೆಗೆಯುವ ನಿಗಮದ ಗುರಿಯ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು; ಗಣಿಗಾರಿಕೆಯನ್ನು ಇನ್ನೂ ಪರಿಣಾಮಕಾರಿಯಾಗಿ ಮಾಡುವ ಮೂಲಕ ಅದಿರು ಉತ್ಪಾದನೆಯಲ್ಲಿ ಹೆಚ್ಚಳ ಸಾಧಿಸಿ. ವಾರ್ಷಿಕ 300 ದಶಲಕ್ಷ ಟನ್ ಉಕ್ಕು ತಯಾರಿಸುವ ಗುರಿಯನ್ನು ಪ್ರಧಾನಿಗಳು ನೀಡಿದ್ದಾರೆ. ಅದನ್ನು ದುಪ್ಪಟ್ಟು ಮಾಡುವ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ ಕೆಲಸ ಮಾಡಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆಚ್ಚು ಪ್ರಮಾಣದಲ್ಲಿ ಗಣಿಗಾರಿಕೆಯನ್ನು ಮಾಡಬೇಕು, ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಅರಣ್ಯ ಬೆಳೆಸಬೇಕು ಎಂದು ಅಧಿಕಾರಿಗಳಿಗೆ ನೇರವಾಗಿ ಹೇಳಿದ ಸಚಿವರು; ಗಣಿಗಾರಿಕೆ, ಪೂರೈಕೆ ಹಾಗೂ ಉಕ್ಕು ತಯಾರಿಕೆಯ ಸರಪಳಿಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದರು.
ಕಬ್ಬಿಣ, ಚಿನ್ನ, ವಜ್ರದ ಗಣಿಗಾರಿಕೆ ನಡೆಸುತ್ತಿರುವ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ ಸಾಧನೆಯ ಪಕ್ಷಿನೋಟ ವೀಕ್ಷಿಸಿದ ಸಚಿವರು, ಕೇಂದ್ರ ಸರ್ಕಾರದಿಂದ ಎಲ್ಲಾ ಸಹಕಾರವೂ ಇರುತ್ತದೆ ಎಂದು ಸಚಿವರು ಭರವಸೆ ನೀಡಿದರು.
ಪ್ರಧಾನಿಗಳ ಮಾರ್ಗದರ್ಶನದೊಂದಿಗೆ ಅವರೇ ನಿಗದಿ ಮಾಡಿರುವ ಗುರಿಯನ್ನು ಮುಟ್ಟಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ಹೇಳಿದರು.
ನಿಗಮದ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಅಮಿತ್ವ ಮುಖರ್ಜಿ ಅವರು ನಿಗಮದ ಕಾರ್ಯ ಚಟುವಟಿಕೆ ಹಾಗೂ ಇನ್ನಿತರೆ ವಿವರಗಳ ಬಗ್ಗೆ ಸಚಿವರಿಗೆ ಪ್ರಾತ್ಯಕ್ಷಿಕೆ ನೀಡಿದರು.
ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ರಾಜ್ಯ ಸಚಿವರಾದ ಭೂಪತಿರಾಜು ಶ್ರೀನಿವಾಸ ವರ್ಮ ಸೇರಿ ನಿಗಮದ ವಿವಿಧ ನಿರ್ದೇಶಕರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…