ದೇಶ- ವಿದೇಶ

ಹ್ಯಾಕ್‌ ಆಗುವ ಸಾಧ್ಯತೆ: ಇವಿಎಂ ನಿಷೇಧಿಸಬೇಕು ಎಂದ ʼಎಲಾನ್‌ ಮಸ್ಕ್‌ʼ

ನವದೆಹಲಿ: ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬಗ್ಗೆ ಭಾರತದಲ್ಲಿ ಅಲ್ಲದೇ ವಿಶ್ವದೆಲ್ಲೆಡೆ ಅಪಸ್ವರ ಎದ್ದಿದೆ. ಟೆಸ್ಲಾ ಸಂಸ್ಥೆಯ ಸಿಇಒ ಹಾಗೂ ಉದ್ಯಮಿ ಎಲಾನ್‌ ಮಸ್ಕ್‌ ಅವರು ಇವಿಎಂ ಗಳು ಹ್ಯಾಕ್‌ ಆಗುವ ಸಾಧ್ಯತೆಗಳಿದ್ದು, ಇವಿಎಂಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿದ್ಯುನ್ಮಾನ ಮತಯಂತ್ರಗಳನ್ನು ತೊಲಗಿಸಬೇಕು. ಇವುಗಳನ್ನು ಮನಷ್ಯರು ಹಾಗೂ ಎಐ (ಕೃತಕ ಬುದ್ಧಿಮತ್ತೆ) ನಿಂದ ಹ್ಯಾಕ್‌ ಮಾಡುವ ಅಪಾಯ ಹೆಚ್ಚಿರುತ್ತದೆ ಎಂದಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಸ್ಥಾನಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ರಾಬರ್ಟ್‌ ಎಫ್‌ ಕೆನಡಿ ಜೂನಿಯರ್‌ ಅವರು ಪ್ಯೊರ್ಟೋ ರಿಕೋ ದೇಶದ ಚುನಾವಣೆಯಲ್ಲಿ ನಡೆದ ಇವಿಎಂ ಅಕ್ರಮಗಳ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಡಿದ್ದಾರೆ. ಈ ಪೋಸ್ಟ್‌ಗೆ ಎಲಾನ್‌ ಮಸ್ಕ್‌ ಪ್ರತಿಕ್ರಿಯಿಸಿ,  ಇವಿಎಂ ಹ್ಯಾಕ್‌ ಆಗುವ ಸಾಧ್ಯತೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಮೆರಿಕಾ ಅಧ್ಯಕ್ಷ ಚುನಾವಣೆಗೂ ಮುನ್ನ ಎಲೆನ್‌ ಮಸ್ಕ್‌  ನೀಡಿರುವ ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಭಾರತದಲ್ಲಿಯೂ ಕೂಡ ವಿಪಕ್ಷ ನಾಯಕರೂ ಧನಿಗೂಡಿಸಿದ್ದಾರೆ.

ಮಸ್ಕ್‌ ಅವರ ಈ ಪೋಸ್ಟ್‌ಗೆ ಭಾರತದ ಮಾಜಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಪ್ರತಿಕ್ರಿಯಿಸಿ, ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವ ಭಾತರದ ಇವಿಎಂಗಳ ಬಗ್ಗೆ ಇವರಿಗೆ ಕಲಿಸಿಕೊಡುವ ಅಗತ್ಯವಿದೆ ಎಂದಿದ್ದಾರೆ. ಅಷ್ಟೆ ಅಲ್ಲದೇ ಭಾರತದಲ್ಲಿರುವ ಇವಿಎಂಗಳು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿವೆ. ಇವಿಎಂಗಳಿಗೆ ವೈಫೈ, ಇಂಟರ್ನೆಡ್‌, ಬ್ಲೂಟೂತ್‌ ಕನೆಕ್ಷನ್‌ ಇರುವುದಿಲ್ಲ. ಇವುಗಳನ್ನು ರೀಪ್ರೋಗ್ರಾಮಿಂಗ್‌ ಮಾಡುಲು ಕೂಡ ಸಾಧ್ಯವಿಲ್ಲ. ಹೀಗಿದ್ದಾಗ, ಹ್ಯಾಕ್‌ ಆಗಲು ಹೇಗೆ ಸಾಧ್ಯ. ಈ ವಿಚಾರದಲ್ಲಿ ಮಸ್ಕ್‌ ಗೆ ಪಾಠ ಮಾಡಲು ನಾವು ತಯಾರು ಎಂದು ಪ್ರತ್ರಿಕ್ರಿಯಿಸಿದ್ದಾರೆ.

ಮಸ್ಕ್‌ ಅವರು ಕೂಡ ಇದಕ್ಕೆ ಉತ್ತರಿಸುತ್ತಾ, ʼಏನನ್ನೂ ಬೇಕಾದರೂ ಹ್ಯಾಕ್‌ ಮಾಡಬಹುದುʼ ಎಂದು ಒನ್ ಲೈನ್‌ನಲ್ಲಿ ತಿಳಿಹೇಳಿದ್ದಾರೆ.

ಈ ಇಬ್ಬರ ವಾಗ್ವಾದದಲ್ಲಿ ಪ್ರವೇಶಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಲನ್‌ ಮಸ್ಕ್‌ ಅವರ ಅಭಿಪ್ರಾಯವನ್ನು ಬೆಂಬಲಿಸಿ, ಭಾರತದಲ್ಲಿನ ಇವಿಎಂಗಳು ಬ್ಲಾಕ್‌ ಬಾಕ್ಸ್‌ ಎಂದು ವ್ಯಾಖ್ಯಾನಿಸಿದ್ದಾರೆ.

ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳು ಬ್ಲ್ಯಾಕ್‌ ಬಾಕ್ಸ್‌ ಇದ್ದಂತೆ. ಅವುಗಳನ್ನು ಪರಿಶೀಲಿಸಲು ಯಾರಿಗೂ ಅನುಮತಿ ಇರುವುದಿಲ್ಲ. ನಮ್ಮ ದೇಶದ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಬಗ್ಗೆ ಗಂಭೀರ ಸ್ವರೂಪರ ಆರೋಪಗಳು ಕೇಳಿಬರುತ್ತಿವೆ. ಸಾಂಸ್ಥಿಕ ಪಾರದರ್ಶಕತೆ ಇಲ್ಲದಾಗ ಪ್ರಜಾತಂತ್ರ ವ್ಯವಸ್ಥೆಗೆ ದುರ್ಗತಿಯೇ ಕಾದಿರುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಮ್ಮ ಎಕ್ಸ್‌ ನಲ್ಲಿ ಎಲೆನ್‌ ಮಸ್ಕ್‌ ಬೆಂಬಲಿಸಿ ಪೋಸ್ಟ್‌ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago