ದೇಶ- ವಿದೇಶ

ಅಕ್ರಮ ಸಂಬಂಧ ಶಂಕೆ : ಲಿವ್‌ಇನ್‌ ಗೆಳತಿಯನ್ನು ಕೊಂದು ಮೃತದೇಹದೊಂದಿಗೆ ಮಲಗಿದ್ದ ಯುವಕ..!

ಭೋಪಾಲ್ : ಬಾಸ್ ಜೊತೆ ಅಕ್ರಮ ಸಂಬಂಧವಿರಬಹುದು ಎಂದು ಶಂಕಿಸಿ ಲಿವ್ ಇನ್ ಗೆಳತಿಯನ್ನು ಕೊಂದು, ಆಕೆಯ ಮೃತದೇಹದೊಂದಿಗೆ 2 ದಿನ ಮಲಗಿದ್ದ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಭೋಪಾಲ್‌ನ ಗಾಯಿತ್ರಿ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯನ್ನು ವಿದಿಶಾದ ಸಿರೋಂಜ್ ಮೂಲದ ಸಚಿನ್ ರಜಪೂತ್ (32) ಹಾಗೂ ಮೃತ ಲಿವ್ ಇನ್ ಗೆಳತಿಯನ್ನು ರಿತಿಕಾ ಸೇನ್ (29) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಕಳೆದ 3.5 ವರ್ಷಗಳಿಂದ ಸಚಿನ್ ಹಾಗೂ ರಿತಿಕಾ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದರು. ಸುಮಾರು 9 ತಿಂಗಳಿಂದ ಇಬ್ಬರು ಗಾಯತ್ರಿ ನಗರದ ಮನೆಯೊಂದರಲ್ಲಿ ವಾಸವಾಗಿದ್ದರು. ರಿತಿಕಾ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಸಚಿನ್ ನಿರುದ್ಯೋಗಿಯಾಗಿದ್ದ ಹಾಗೂ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದರು.

ಜೂ.27ರಂದು ರಾತ್ರಿ ರಿತಿಕಾಳಿಗೆ ಕಂಪನಿಯ ಬಾಸ್ ಜೊತೆ ಸಂಬಂಧವಿದೆ ಎಂದು ಶಂಕಿಸಿ ಇಬ್ಬರ ನಡುವೆ ಜಗಳವಾಗಿತ್ತು. ಅದು ವಾದ-ವಿವಾದಕ್ಕೆ ತಿರುಗಿ ಅತಿರೇಕಕ್ಕೆ ಹೋಗಿತ್ತು. ಇದೇ ಕೋಪದಲ್ಲಿ ಸಚಿನ್ ರಿತಿಕಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಮೃತದೇಹವನ್ನು ಬೆಡ್ಶೀಟ್ನಲ್ಲಿ ಸುತ್ತಿ, ಆಕೆಯ ಪಕ್ಕದಲ್ಲಿ ಎರಡು ದಿನ ಮಲಗಿದ್ದಾನೆ. ಕೊಲೆ ಮಾಡಿದ ಬಳಿಕ ಕುಡಿಯುತ್ತಾ ತೀರಾ ಆಘಾತಕ್ಕೆ ಒಳಗಾಗಿದ್ದ. ನಶೆಯಲ್ಲಿ ತನ್ನ ಸ್ನೇಹಿತ ಅನೂಜ್‌ಗೆ ಕರೆ ಮಾಡಿ, ನಡೆದಿರುವ ವಿಷಯವನ್ನು ತಿಳಿಸಿದ. ಆದರೆ ಅನೂಜ್ ಮಾತ್ರ ನಶೆಯಲ್ಲಿ ಏನೇನೋ ಮಾತಾಡುತ್ತಿದ್ದಾನೆ ಎಂದುಕೊಂಡು ನಂಬಿರಲಿಲ್ಲ.

ಮಾರನೇ ದಿನ ಸಚಿನ್ ಮತ್ತದೇ ವಿಷಯವನ್ನು ಹೇಳಿದಾಗ ಅನೂಜ್ ಪೊಲೀಸರಿಗೆ ಮಾಹಿತಿ ನೀಡಿದ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ರಿತಿಕಾ ಮೃತದೇಹ ಪತ್ತೆಯಾಗಿತ್ತು. ಸದ್ಯ ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಆರೋಪಿ ಸಚಿನ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

1 min ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

13 mins ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago