ದೇಶ- ವಿದೇಶ

ಪೊಲೀಸರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಿದರೆ ಕ್ರಿಮಿನಲ್ ಅಪರಾಧವಾಗುವುದಿಲ್ಲ : ಹೈಕೋರ್ಟ್​

ಹಿಮಾಚಲ ಪ್ರದೇಶ : ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧವಾಗುದಿಲ್ಲ ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್, ಚಾಲಕನೋರ್ವನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ.

ಸಂಚಾರ ಕರ್ತವ್ಯ ನಿರತ ಪೊಲೀಸರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ಹೇಳಿದಾಗ ಫೇಸ್‌ಬುಕ್ ನೇರಪ್ರಸಾರ ಕೈಗೊಂಡು ಕೆಲ ಟೀಕೆಗಳನ್ನು ಮಾಡಿದ್ದ ಚಾಲಕನೊಬ್ಬನ ವಿರುದ್ಧದ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಸಂದೀಪ್ ಶರ್ಮಾ ಅವರ ಪೀಠ ಈ ವಿಚಾರ ತಿಳಿಸಿದೆ.

ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸಲು ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಶಿಮ್ಲಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಆರಂಭಿಸಲಾಗಿದ್ದ ವಿಚಾರಣೆ ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:-ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿದ್ದ ಇಬ್ಬರು ಪೊಲೀಸರ ಬಂಧನ

ವ್ಯಕ್ತಿಯ ನಡೆ ಸಾತ್ವಿಕವಾಗಿದ್ದರೆ ಅದು ಕರ್ತವ್ಯಕ್ಕೆ ಅಡ್ಡಿ ಎಂದು ಹೇಳಲಾಗದು. ಬದಲಿಗೆ ಬಲಪ್ರದರ್ಶನ, ಬೆದರಿಕೆ ಇಲ್ಲವೇ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ಕ್ರಿಯೆ ನಡೆದಿದ್ದಾಗ ಮಾತ್ರ ಐಪಿಸಿ ಸೆಕ್ಷನ್ 186 ಅಡಿ ಕರ್ತವ್ಯಕ್ಕೆ ಅಡಚಣೆ ಎನ್ನಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಅರ್ಜಿದಾರರ ವಿರುದ್ಧದ ನಿಖರ ಆರೋಪ ಏನೆಂದರೆ ಅವರು ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಾಡಿ ಕೆಲ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದು. ಆದರೆ ಖಂಡಿತವಾಗಿಯೂ ಅಂತಹ ಯಾವುದಾದರೂ ಕೃತ್ಯ ನಡೆದಿದ್ದರೆ ಅದು ಅರ್ಜಿದಾರರು ಕರ್ತವ್ಯಕ್ಕೆ ಉಂಟುಮಾಡಿದ ಅಡಚಣೆ ಎನ್ನಲಾಗದು ಎಂದು ನ್ಯಾಯಾಲಯ ಹೇಳಿದೆ.

ಆರೋಪಿಗಳು ದೈಹಿಕ ಬಲ ಬಳಸಿ ಪೊಲೀಸ್ ಅಧಿಕಾರಿಗೆ ಯಾವುದೇ ಅಡ್ಡಿ ಉಂಟು ಮಾಡಿದ ಆರೋಪವಿಲ್ಲದಿದ್ದರೆ, ಐಪಿಸಿ ಸೆಕ್ಷನ್ 186ರ ಅಡಿಯಲ್ಲಿ ಯಾವುದೇ ಪ್ರಕರಣವನ್ನು ಹೂಡಲಾಗದು. ಫೇಸ್‌ಬುಕ್‌ನಲ್ಲಿ ಕೆಲ ಟೀಕೆ ಮಾಡಿದ್ದಾರೆ ಎಂಬ ಅಂಶ ಅರ್ಜಿದಾರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತೀರ್ಮಾನಕ್ಕೆ ಬರಲು ಸಾಕಾಗುವುದಿಲ್ಲ. ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಅವರ ಹೇಳಿಕೆಗಳು ಇರುವುದು ಎಲ್ಲಿಯೂ ಕಂಡುಬರುವುದಿಲ್ಲ ಎಂದು ಅದು ವಿವರಿಸಿದೆ. ಬದಲಿಗೆ, ನೇರ ಪ್ರಸಾರದ ಮೂಲಕ, ಅರ್ಜಿದಾರರು ತಾನು ಅನಗತ್ಯವಾಗಿ ಕಿರುಕುಳ ಅನುಭವಿಸಿದ್ದಾಗಿ ಹೇಳಿದ್ದಾರೆ” ಎಂದು ನ್ಯಾಯಾಲಯ ಚಾಲಕನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿ ಆದೇಶಿಸಿದೆ.

ಆಂದೋಲನ ಡೆಸ್ಕ್

Recent Posts

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

1 min ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

7 mins ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

11 mins ago

‘ಸರ್ಕಾರಿ ಪಿಯು ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ ಭಾಗ್ಯ’

ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ…

16 mins ago

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

8 hours ago