ದೇಶ- ವಿದೇಶ

ಪೊಲೀಸರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಿದರೆ ಕ್ರಿಮಿನಲ್ ಅಪರಾಧವಾಗುವುದಿಲ್ಲ : ಹೈಕೋರ್ಟ್​

ಹಿಮಾಚಲ ಪ್ರದೇಶ : ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧವಾಗುದಿಲ್ಲ ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್, ಚಾಲಕನೋರ್ವನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ.

ಸಂಚಾರ ಕರ್ತವ್ಯ ನಿರತ ಪೊಲೀಸರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ಹೇಳಿದಾಗ ಫೇಸ್‌ಬುಕ್ ನೇರಪ್ರಸಾರ ಕೈಗೊಂಡು ಕೆಲ ಟೀಕೆಗಳನ್ನು ಮಾಡಿದ್ದ ಚಾಲಕನೊಬ್ಬನ ವಿರುದ್ಧದ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಸಂದೀಪ್ ಶರ್ಮಾ ಅವರ ಪೀಠ ಈ ವಿಚಾರ ತಿಳಿಸಿದೆ.

ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸಲು ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಶಿಮ್ಲಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಆರಂಭಿಸಲಾಗಿದ್ದ ವಿಚಾರಣೆ ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:-ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿದ್ದ ಇಬ್ಬರು ಪೊಲೀಸರ ಬಂಧನ

ವ್ಯಕ್ತಿಯ ನಡೆ ಸಾತ್ವಿಕವಾಗಿದ್ದರೆ ಅದು ಕರ್ತವ್ಯಕ್ಕೆ ಅಡ್ಡಿ ಎಂದು ಹೇಳಲಾಗದು. ಬದಲಿಗೆ ಬಲಪ್ರದರ್ಶನ, ಬೆದರಿಕೆ ಇಲ್ಲವೇ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ಕ್ರಿಯೆ ನಡೆದಿದ್ದಾಗ ಮಾತ್ರ ಐಪಿಸಿ ಸೆಕ್ಷನ್ 186 ಅಡಿ ಕರ್ತವ್ಯಕ್ಕೆ ಅಡಚಣೆ ಎನ್ನಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಅರ್ಜಿದಾರರ ವಿರುದ್ಧದ ನಿಖರ ಆರೋಪ ಏನೆಂದರೆ ಅವರು ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಾಡಿ ಕೆಲ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದು. ಆದರೆ ಖಂಡಿತವಾಗಿಯೂ ಅಂತಹ ಯಾವುದಾದರೂ ಕೃತ್ಯ ನಡೆದಿದ್ದರೆ ಅದು ಅರ್ಜಿದಾರರು ಕರ್ತವ್ಯಕ್ಕೆ ಉಂಟುಮಾಡಿದ ಅಡಚಣೆ ಎನ್ನಲಾಗದು ಎಂದು ನ್ಯಾಯಾಲಯ ಹೇಳಿದೆ.

ಆರೋಪಿಗಳು ದೈಹಿಕ ಬಲ ಬಳಸಿ ಪೊಲೀಸ್ ಅಧಿಕಾರಿಗೆ ಯಾವುದೇ ಅಡ್ಡಿ ಉಂಟು ಮಾಡಿದ ಆರೋಪವಿಲ್ಲದಿದ್ದರೆ, ಐಪಿಸಿ ಸೆಕ್ಷನ್ 186ರ ಅಡಿಯಲ್ಲಿ ಯಾವುದೇ ಪ್ರಕರಣವನ್ನು ಹೂಡಲಾಗದು. ಫೇಸ್‌ಬುಕ್‌ನಲ್ಲಿ ಕೆಲ ಟೀಕೆ ಮಾಡಿದ್ದಾರೆ ಎಂಬ ಅಂಶ ಅರ್ಜಿದಾರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತೀರ್ಮಾನಕ್ಕೆ ಬರಲು ಸಾಕಾಗುವುದಿಲ್ಲ. ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಅವರ ಹೇಳಿಕೆಗಳು ಇರುವುದು ಎಲ್ಲಿಯೂ ಕಂಡುಬರುವುದಿಲ್ಲ ಎಂದು ಅದು ವಿವರಿಸಿದೆ. ಬದಲಿಗೆ, ನೇರ ಪ್ರಸಾರದ ಮೂಲಕ, ಅರ್ಜಿದಾರರು ತಾನು ಅನಗತ್ಯವಾಗಿ ಕಿರುಕುಳ ಅನುಭವಿಸಿದ್ದಾಗಿ ಹೇಳಿದ್ದಾರೆ” ಎಂದು ನ್ಯಾಯಾಲಯ ಚಾಲಕನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿ ಆದೇಶಿಸಿದೆ.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago