ನವದೆಹಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನವು ಶನಿವಾರ(ಮೇ.25) ಮುಕ್ತಾಯವಾಗಿದ್ದು, ಶೇ.59 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಏಳು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಹಿಂಸಾಚಾರದ ವರದಿಗಳ ನಡುವೆಯೂ 6ನೇ ಹಂತದ ಮತದಾನದಲ್ಲಿ ಪಶ್ಚಿಮ ಬಂಗಾಳದಲ್ಲಿ ಶೇ.78.19ರಷ್ಟು ಮತದಾನವಾಗಿದ್ದು, ದೆಹಲಿಯಲ್ಲಿ ಶೇ.34.4 ಅಂದರೆ ಅತ್ಯಂತ ಕಡಿಮೆ ಮತದಾನವಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ -ರಜೌರಿ ಲೋಕಸಭಾ ಕ್ಷೇತ್ರದಲ್ಲಿ 52.28 ರಷ್ಟು ಮತದಾನವಾಗಿದ್ದು, ಹಲವು ದಶಕಗಳಲ್ಲಿ ನಡೆದಿರುವ ಅತ್ಯಧಿಕ ಮತದಾನ ಪ್ರಮಾಣ ಇದಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಪ್ರಮುಖರು ತಮ್ಮ ಮತದಾನದ ಹಕ್ಕನ್ನು ದೆಹಲಿಯಲ್ಲಿ ಚಲಾಯಿಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…