ದೇಶ- ವಿದೇಶ

ಲೋಕಸಭಾ ಚುನಾವಣೆ 2024: ನಟ ಅಕ್ಷಯ್‌ ಕುಮಾರ್‌ ಸೇರಿದಂತೆ ಬಾಲಿವುಡ್‌ ಸೆಲಿಬ್ರಿಟಿಗಳಿಂದ ಮತದಾನ

ಮುಂಬೈ: 8 ರಾಜ್ಯಗಳ 49 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು(ಮೇ.20) ನಡೆಯುತ್ತಿದ್ದು, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅದರಂತೆ ಉದ್ಯಮಿಗಳು, ಸೆಲೆಬ್ರಿಟಿಗಳು, ರಾಜಕೀಯ ಮುಖಂಡರು ಸಹ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಫರ್ಹಾನ್‌ ಅಖ್ತಾರ್‌, ಜೋಯಾ ಅಖ್ತರ್‌, ರಾಜ್‌ಕುಮಾರ್‌ ರಾವ್‌, ಜಾಹ್ನವಿ ಕಪೂರ್‌, ಪರೇಶ್‌ ರಾವಲ್‌, ನ್ಯಾ ಮಲ್ಹೋತ್ರಾ ಸೇರಿದಂತೆ ಬಾಲಿವುಡ್‌ ಸೆಲಿಬ್ರಿಟಿಗಳು ಹಾಗೂ ಹಲವು ಗಣ್ಯರು ಮತ ಚಲಾಯಿಸಿದ್ದಾರೆ.

ಮೊದಲ ಬಾರಿಗೆ ಮತ ಚಲಾಯಿಸಿದ ನಟ ಅಕ್ಷಯ್‌ ಕುಮಾರ್‌
ಭಾರತೀಯ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ನಟ ಅಕ್ಷಯ್‌ ಕುಮಾರ್ ಮತ ಚಲಾಯಿಸಿದ್ದಾರೆ. ಮುಂಬೈನ ಮತಗಟ್ಟೆವೊಂದರಲ್ಲಿ ಭಾರತೀಯ ಪ್ರಜೆಯಾಗಿ ಮತ ಚಲಾಯಿಸಿದ್ದಾರೆ. ಅಕ್ಷಯ್‌ ಕುಮಾರ್‌ ಅವರು 2023 ರಲ್ಲಿ ಭಾರತೀಯ ಪೌರತ್ವ ಪಡೆದಿದ್ದರು. ಇದಕ್ಕೂ ಮುನ್ನ ಅವರು ಕೆನಡಾದ ಪೌರತ್ವ ಪಡೆದಿದ್ದರು.

ಮತದಾನ ಬಳಿಕ ಸುದ್ದಿಗಾರರೊಂದಿಗೆ ಮತನಾಡಿದ ನಟ ಅಕ್ಷಯ್‌ ಕುಮಾರ್‌, ನನ್ನ ಭಾರತವು ಅಭಿವೃದ್ದಿ ಹೊಂದಬೇಕು ಜೊತೆಗೆ ಬಲಿಷ್ಠವಾಗಿರಬೇಕು. ಇದೆಲ್ಲವನ್ನು ನಾನು ಮನದಲ್ಲಿಟ್ಟಿಕೊಂಡು ಮತ ಹಾಕಿದ್ದೇನೆ. ಭಾರತೀಯ ಜನರಿಗೆ ತಮಗೆ ಸರಿ ಎನಿಸುವ ನಾಯಕನಿಗೆ ಮತ ಹಾಕುವಂತೆ ಮನವಿ ಮಾಡುತ್ತೇನೆ ಎಂದರು.

ಕಣದಲ್ಲಿರುವ ಪ್ರಮುಖರು
ರಾಯ್‌ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಅಮೇಥಿ ಕ್ಷೇತ್ರದಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಲಕ್ನೋದಿಂದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೈಸರ್‌ಗಂಜ್‌ನಿಂದ ಬ್ರಿಜ್‌ ಭೂಷಣ್ ಸಿಂಗ್‌ ಅವರ ಮಗ ಕರಣ್ ಭೂಷಣ್‌ ಸಿಂಗ್‌, ಮುಂಬೈ ಉತ್ತರ ಕ್ಷೇತ್ರದಿಂದ ಸಚಿವ ಪಿಯೂಷ್‌ ಗೋಯಲ್‌ ಹಾಗೂ ಬಾರಾಮುಲ್ಲಾದಿಂದ ನ್ಯಾಷನಲ್‌ ಕಾನ್ಫರೆನ್ಸ್‌ ಉಪಾಧ್ಯಕ್ಷ ಓಮರ್‌ ಅಬ್ದುಲ್ಲಾ ಕಣದಲ್ಲಿರುವ ಪ್ರಮುಖರು.

ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

1 hour ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

2 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

2 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

2 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

14 hours ago