ದೇಶ- ವಿದೇಶ

ಲೋಕಸಭಾ ಚುನಾವಣೆ 2024: ನಟ ಅಕ್ಷಯ್‌ ಕುಮಾರ್‌ ಸೇರಿದಂತೆ ಬಾಲಿವುಡ್‌ ಸೆಲಿಬ್ರಿಟಿಗಳಿಂದ ಮತದಾನ

ಮುಂಬೈ: 8 ರಾಜ್ಯಗಳ 49 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು(ಮೇ.20) ನಡೆಯುತ್ತಿದ್ದು, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅದರಂತೆ ಉದ್ಯಮಿಗಳು, ಸೆಲೆಬ್ರಿಟಿಗಳು, ರಾಜಕೀಯ ಮುಖಂಡರು ಸಹ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಫರ್ಹಾನ್‌ ಅಖ್ತಾರ್‌, ಜೋಯಾ ಅಖ್ತರ್‌, ರಾಜ್‌ಕುಮಾರ್‌ ರಾವ್‌, ಜಾಹ್ನವಿ ಕಪೂರ್‌, ಪರೇಶ್‌ ರಾವಲ್‌, ನ್ಯಾ ಮಲ್ಹೋತ್ರಾ ಸೇರಿದಂತೆ ಬಾಲಿವುಡ್‌ ಸೆಲಿಬ್ರಿಟಿಗಳು ಹಾಗೂ ಹಲವು ಗಣ್ಯರು ಮತ ಚಲಾಯಿಸಿದ್ದಾರೆ.

ಮೊದಲ ಬಾರಿಗೆ ಮತ ಚಲಾಯಿಸಿದ ನಟ ಅಕ್ಷಯ್‌ ಕುಮಾರ್‌
ಭಾರತೀಯ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ನಟ ಅಕ್ಷಯ್‌ ಕುಮಾರ್ ಮತ ಚಲಾಯಿಸಿದ್ದಾರೆ. ಮುಂಬೈನ ಮತಗಟ್ಟೆವೊಂದರಲ್ಲಿ ಭಾರತೀಯ ಪ್ರಜೆಯಾಗಿ ಮತ ಚಲಾಯಿಸಿದ್ದಾರೆ. ಅಕ್ಷಯ್‌ ಕುಮಾರ್‌ ಅವರು 2023 ರಲ್ಲಿ ಭಾರತೀಯ ಪೌರತ್ವ ಪಡೆದಿದ್ದರು. ಇದಕ್ಕೂ ಮುನ್ನ ಅವರು ಕೆನಡಾದ ಪೌರತ್ವ ಪಡೆದಿದ್ದರು.

ಮತದಾನ ಬಳಿಕ ಸುದ್ದಿಗಾರರೊಂದಿಗೆ ಮತನಾಡಿದ ನಟ ಅಕ್ಷಯ್‌ ಕುಮಾರ್‌, ನನ್ನ ಭಾರತವು ಅಭಿವೃದ್ದಿ ಹೊಂದಬೇಕು ಜೊತೆಗೆ ಬಲಿಷ್ಠವಾಗಿರಬೇಕು. ಇದೆಲ್ಲವನ್ನು ನಾನು ಮನದಲ್ಲಿಟ್ಟಿಕೊಂಡು ಮತ ಹಾಕಿದ್ದೇನೆ. ಭಾರತೀಯ ಜನರಿಗೆ ತಮಗೆ ಸರಿ ಎನಿಸುವ ನಾಯಕನಿಗೆ ಮತ ಹಾಕುವಂತೆ ಮನವಿ ಮಾಡುತ್ತೇನೆ ಎಂದರು.

ಕಣದಲ್ಲಿರುವ ಪ್ರಮುಖರು
ರಾಯ್‌ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಅಮೇಥಿ ಕ್ಷೇತ್ರದಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಲಕ್ನೋದಿಂದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೈಸರ್‌ಗಂಜ್‌ನಿಂದ ಬ್ರಿಜ್‌ ಭೂಷಣ್ ಸಿಂಗ್‌ ಅವರ ಮಗ ಕರಣ್ ಭೂಷಣ್‌ ಸಿಂಗ್‌, ಮುಂಬೈ ಉತ್ತರ ಕ್ಷೇತ್ರದಿಂದ ಸಚಿವ ಪಿಯೂಷ್‌ ಗೋಯಲ್‌ ಹಾಗೂ ಬಾರಾಮುಲ್ಲಾದಿಂದ ನ್ಯಾಷನಲ್‌ ಕಾನ್ಫರೆನ್ಸ್‌ ಉಪಾಧ್ಯಕ್ಷ ಓಮರ್‌ ಅಬ್ದುಲ್ಲಾ ಕಣದಲ್ಲಿರುವ ಪ್ರಮುಖರು.

ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago