ದೇಶ- ವಿದೇಶ

ಲೋಕಸಭಾ ಚುನಾವಣೆ 2024: ನಟ ಅಕ್ಷಯ್‌ ಕುಮಾರ್‌ ಸೇರಿದಂತೆ ಬಾಲಿವುಡ್‌ ಸೆಲಿಬ್ರಿಟಿಗಳಿಂದ ಮತದಾನ

ಮುಂಬೈ: 8 ರಾಜ್ಯಗಳ 49 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಇಂದು(ಮೇ.20) ನಡೆಯುತ್ತಿದ್ದು, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅದರಂತೆ ಉದ್ಯಮಿಗಳು, ಸೆಲೆಬ್ರಿಟಿಗಳು, ರಾಜಕೀಯ ಮುಖಂಡರು ಸಹ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಫರ್ಹಾನ್‌ ಅಖ್ತಾರ್‌, ಜೋಯಾ ಅಖ್ತರ್‌, ರಾಜ್‌ಕುಮಾರ್‌ ರಾವ್‌, ಜಾಹ್ನವಿ ಕಪೂರ್‌, ಪರೇಶ್‌ ರಾವಲ್‌, ನ್ಯಾ ಮಲ್ಹೋತ್ರಾ ಸೇರಿದಂತೆ ಬಾಲಿವುಡ್‌ ಸೆಲಿಬ್ರಿಟಿಗಳು ಹಾಗೂ ಹಲವು ಗಣ್ಯರು ಮತ ಚಲಾಯಿಸಿದ್ದಾರೆ.

ಮೊದಲ ಬಾರಿಗೆ ಮತ ಚಲಾಯಿಸಿದ ನಟ ಅಕ್ಷಯ್‌ ಕುಮಾರ್‌
ಭಾರತೀಯ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ನಟ ಅಕ್ಷಯ್‌ ಕುಮಾರ್ ಮತ ಚಲಾಯಿಸಿದ್ದಾರೆ. ಮುಂಬೈನ ಮತಗಟ್ಟೆವೊಂದರಲ್ಲಿ ಭಾರತೀಯ ಪ್ರಜೆಯಾಗಿ ಮತ ಚಲಾಯಿಸಿದ್ದಾರೆ. ಅಕ್ಷಯ್‌ ಕುಮಾರ್‌ ಅವರು 2023 ರಲ್ಲಿ ಭಾರತೀಯ ಪೌರತ್ವ ಪಡೆದಿದ್ದರು. ಇದಕ್ಕೂ ಮುನ್ನ ಅವರು ಕೆನಡಾದ ಪೌರತ್ವ ಪಡೆದಿದ್ದರು.

ಮತದಾನ ಬಳಿಕ ಸುದ್ದಿಗಾರರೊಂದಿಗೆ ಮತನಾಡಿದ ನಟ ಅಕ್ಷಯ್‌ ಕುಮಾರ್‌, ನನ್ನ ಭಾರತವು ಅಭಿವೃದ್ದಿ ಹೊಂದಬೇಕು ಜೊತೆಗೆ ಬಲಿಷ್ಠವಾಗಿರಬೇಕು. ಇದೆಲ್ಲವನ್ನು ನಾನು ಮನದಲ್ಲಿಟ್ಟಿಕೊಂಡು ಮತ ಹಾಕಿದ್ದೇನೆ. ಭಾರತೀಯ ಜನರಿಗೆ ತಮಗೆ ಸರಿ ಎನಿಸುವ ನಾಯಕನಿಗೆ ಮತ ಹಾಕುವಂತೆ ಮನವಿ ಮಾಡುತ್ತೇನೆ ಎಂದರು.

ಕಣದಲ್ಲಿರುವ ಪ್ರಮುಖರು
ರಾಯ್‌ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಅಮೇಥಿ ಕ್ಷೇತ್ರದಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಲಕ್ನೋದಿಂದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೈಸರ್‌ಗಂಜ್‌ನಿಂದ ಬ್ರಿಜ್‌ ಭೂಷಣ್ ಸಿಂಗ್‌ ಅವರ ಮಗ ಕರಣ್ ಭೂಷಣ್‌ ಸಿಂಗ್‌, ಮುಂಬೈ ಉತ್ತರ ಕ್ಷೇತ್ರದಿಂದ ಸಚಿವ ಪಿಯೂಷ್‌ ಗೋಯಲ್‌ ಹಾಗೂ ಬಾರಾಮುಲ್ಲಾದಿಂದ ನ್ಯಾಷನಲ್‌ ಕಾನ್ಫರೆನ್ಸ್‌ ಉಪಾಧ್ಯಕ್ಷ ಓಮರ್‌ ಅಬ್ದುಲ್ಲಾ ಕಣದಲ್ಲಿರುವ ಪ್ರಮುಖರು.

ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

57 mins ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

1 hour ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

1 hour ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

14 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago