ಮೈಸೂರು: ದೇಶದಲ್ಲಿ ಈಗಾಗಲೇ ನಾಲ್ಕು ಹಂತದ ಚುನಾವಣೆಗಳು ಮುಗಿದಿದ್ದು, ಇನ್ನು ಮೂರು ಹಂತದ ಚುನಾವಣೆಗಳು ಬಾಕಿ ಇವೆ. ಐದನೇ ಹಂತದ ಚುನಾವಣೆ ನಾಳೆ(ಮೇ.೨೦) ನಡೆಯಲಿದ್ದು, ಘಟಾನುಘಟಿಗಳು ಸ್ಪರ್ಧಿಸಿರುವ ಹೈವೋಲ್ಟೆಜ್ ಕ್ಷೇತ್ರಗಳಿಂದ ಕೂಡಿದ ಐದನೇ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ.
ಐದನೇ ಹಂತದಲ್ಲಿ ಒಟ್ಟು ೮ ರಾಜ್ಯಗಳ ೪೯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶ ೧೪, ಮಹಾರಾಷ್ಟ್ರ ೧೩, ಪಶ್ಚಿಮ ಬಂಗಾಳ ೭, ಬಿಹಾರ, ಒಡಿಶಾ ೫, ಜಾರ್ಖಾಂಡ್ನ ೩ ಹಾಗೂ ಜಮ್ಮು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ಜರುಗಲಿದೆ. ಒಟ್ಟು ೬೯೫ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕಣದಲ್ಲಿರುವ ಪ್ರಮುಖರು: ರಾಯ್ ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಮೇಥಿ ಕ್ಷೇತ್ರದಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಲಕ್ನೋದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೈಸರ್ಗಂಜ್ನಿಂದ ಬ್ರಿಜ್ ಭೂಷಣ್ ಸಿಂಗ್ ಅವರ ಮಗ ಕರಣ್ ಭೂಷಣ್ ಸಿಂಗ್, ಮುಂಬೈ ಉತ್ತರ ಕ್ಷೇತ್ರದಿಂದ ಸಚಿವ ಪಿಯೂಷ್ ಗೋಯಲ್ ಹಾಗೂ ಬಾರಾಮುಲ್ಲಾದಿಂದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಕಣದಲ್ಲಿರುವ ಪ್ರಮುಖರು.
ಲೋಕಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದೆ. ಏಪ್ರಿಲ್ ೧೯, ಏಪ್ರಿಲ್ ೨೬, ಮೇ ೭, ಮೇ ೧೩, ಮೇ ೨೦. ಮೇ ೨೫, ಜೂನ್ ೧ ರಂದು ಮತದಾನ ನಡೆಯಲಿದೆ. ಮತ ಎಣಿಕೆ ಜೂನ್ ೪ ರಂದು ನಡೆಯಲಿದೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…