ದೇಶ- ವಿದೇಶ

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ‘ವಿಕಸಿತ್ ಭಾರತ್ ಜಿ ರಾಮ್ ಜಿ’ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.

೨೦ ವರ್ಷಗಳಷ್ಟು ಹಳೆಯದಾದ ಮನ್ರೇಗಾ ಬದಲಿಗೆ ಪ್ರತಿ ವರ್ಷ ೧೨೫ ದಿನಗಳ ಗ್ರಾಮೀಣ ಉದ್ಯೋಗಗಳನ್ನು ಖಾತರಿಪಡಿಸುವ ವಿಬಿ-ಜಿ ರಾಮ್ ಜಿ ಮಸೂದೆ – ೨೦೨೫ ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.

ಇದನ್ನೂ ಓದಿ:-ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಗುರುವಾರ ಮಸೂದೆ ಮೇಲಿನ ಚರ್ಚೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಉತ್ತರಿಸಿದ ನಂತರ, ಅದನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೂ, ಲೋಕಸಭೆಯು ಜಿ ರಾಮ್ ಜಿ ಮಸೂದೆ ಅಂಗೀಕರಿಸಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದರು.

ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟಿದ್ದನ್ನು ವಿರೋಧಿಸಿ, ಪ್ರತಿಪಕ್ಷಗಳ ಸದಸ್ಯರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಪಕ್ಷಗಳ ತೀವ್ರ ಗದ್ದಲದ ಪರಿಣಾಮವಾಗಿ, ಓಂ ಬಿರ್ಲಾ ಅವರು ಲೋಕಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

7 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

8 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

8 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

9 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

9 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

9 hours ago