Teacher Transfers Spark Student Protest; Classes Boycotted
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ‘ವಿಕಸಿತ್ ಭಾರತ್ ಜಿ ರಾಮ್ ಜಿ’ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.
೨೦ ವರ್ಷಗಳಷ್ಟು ಹಳೆಯದಾದ ಮನ್ರೇಗಾ ಬದಲಿಗೆ ಪ್ರತಿ ವರ್ಷ ೧೨೫ ದಿನಗಳ ಗ್ರಾಮೀಣ ಉದ್ಯೋಗಗಳನ್ನು ಖಾತರಿಪಡಿಸುವ ವಿಬಿ-ಜಿ ರಾಮ್ ಜಿ ಮಸೂದೆ – ೨೦೨೫ ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.
ಇದನ್ನೂ ಓದಿ:-ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ
ಗುರುವಾರ ಮಸೂದೆ ಮೇಲಿನ ಚರ್ಚೆಗೆ ಶಿವರಾಜ್ ಸಿಂಗ್ ಚೌಹಾಣ್ ಅವರು ಉತ್ತರಿಸಿದ ನಂತರ, ಅದನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೂ, ಲೋಕಸಭೆಯು ಜಿ ರಾಮ್ ಜಿ ಮಸೂದೆ ಅಂಗೀಕರಿಸಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದರು.
ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟಿದ್ದನ್ನು ವಿರೋಧಿಸಿ, ಪ್ರತಿಪಕ್ಷಗಳ ಸದಸ್ಯರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಪಕ್ಷಗಳ ತೀವ್ರ ಗದ್ದಲದ ಪರಿಣಾಮವಾಗಿ, ಓಂ ಬಿರ್ಲಾ ಅವರು ಲೋಕಸಭೆ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…