ದೇಶ- ವಿದೇಶ

ಲೋಕಸಭೆ ಫಲಿತಾಂಶ ಭಾರತ ಜೋಡೋ ಯಾತ್ರೆಯ ಫಲ: ಖರ್ಗೆ

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು(ಜೂ.8) ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲಾಗಿದೆ.

ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದೇಶದ ಲಕ್ಷಂತರ ಜನರ ಅಚಲ ನಿರ್ಧಾರದ ಬಗ್ಗೆ ಕೃತಜ್ಞತೆಗಳನ್ನು ಸಲ್ಲಿಸಿ ಮಾತು ಆರಂಭಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಸ್ತುತ ಲೋಕಸಭಾ ಚುನಾವಣೆಯ ಫಲಿತಾಂಶ ದೇಶ ವಿಭಜನೆ ಮತ್ತು ದ್ವೇಷ ಬಿತ್ತುವವರಿಗೆ ನೀಡಿದ ಜನಾದೇಶವಾಗಿದೆ. ನಾವು ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುವುದನ್ನು ಮುಂದುವರಿಸ ಬೇಕು ಎಂದು ಕರೆ ಕೊಟ್ಟಿದ್ದಾರೆ.

ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಎಂಬುದನ್ನು ಜನತೆ ತೋರಿಸಿಕೊಟ್ಟಿದ್ದಾರೆ. ನಾವು ಸಂಘಟಿತರಾಗಿ ಹೋರಾಟ ನಡೆಸಿದರೆ ಎಂತಹ ವಿಭಜಕ ಶಕ್ತಿಗಳನ್ನು ಮಣಿಸುವ ಶಕ್ತಿ ಇದೆ ಎಂಬುದಕ್ಕೆ ಫಲಿತಾಂಶವೇ ಸಾಕ್ಷಿ. ನಾವು ಇನ್ನಷ್ಟು ಒಗ್ಗಟ್ಟಿನಿಂದ ಶ್ರಮ ಹಾಕಿದ್ದರೆ ನಮಗೆ ಮತ್ತಷ್ಟು ಸ್ಥಾನಗಳು ಬರುತ್ತಿದ್ದವು. ಶೇಕಡವಾರು ಮತದಾನದಲ್ಲಿ ನಾವು ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಮಣಿಪುರದಲ್ಲಿ 2 ಸ್ಥಾನ, ನಾಗಲ್ಯಾಂಡ್ ಅಸ್ಸಾಂ, ಮೇಘಾಲಯದಲ್ಲಿ ನಾವು ಹೆಚ್ಚಿನ ಸ್ಥಾನ ಗೆದ್ದಿದ್ದೇವೆ. ಅಷ್ಟೇ ಏಕೆ ಮಹಾರಾಷ್ಟ್ರದಲ್ಲೂ ಆಡಳಿತ ಪಕ್ಷವನ್ನು ಮೆಟ್ಟಿ ನಾವು ದೊಡ್ಡ ಪಕ್ಷವಾಗಿ ಹೊರಹೊಮಿದ್ದೇವೆ. ಪ್ರಜಾಪ್ರಭುತ್ವದ ಉಳಿವು, ಸಂವಿಧಾನ ರಕ್ಷಣೆಗಾಗಿ ಎಲ್ಲ ವರ್ಗದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದು ಬರುವ ದಿನಗಳಲ್ಲಿ ಕಾಂಗ್ರೆಸ್ ಮೈತ್ರಿಕೂಟವಾದ ಇಂಡಿಯಾ ಬಣಕ್ಕೆ ಶುಭದಾಯಕದ ಮುನ್ಸೂಚನೆ ಎಂದು ಖರ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ್‌ ಜೋಡೋ ಯಾತ್ರೆಯ ಪ್ರಭಾವವನ್ನು ಎತ್ತಿ ಹಿಡಿದ ಖರ್ಗೆ ಅವರು, ಯಾತ್ರೆ ನಡೆದ ಸ್ಥಳಗಳಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಿಸಿದೆ. ಸಂವಿಧಾನ, ಆರ್ಥಿಕ ಸಮಾನತೆ, ನಿರುದ್ಯೋಗ ಸಮಸ್ಯೆಗಳನ್ನು ಎತ್ತಿ ದೇಶದ ಜನತೆಗೆ ರಾಹುಲ್‌ ಅವರು ಅರಿವು ಮೂಡಿಸಿದ್ದಾರೆ ಎಂದು ರಾಹುಲ್‌ ಗಾಂಧಿಯನ್ನು ಅಭಿನಂಧಿಸಿದರು.

ಕೇಂದ್ರದಲ್ಲಿ ಕಳೆದ 10 ವರ್ಷಗಳ ಕಾಲ ಅಧಿಕಾರ ನಡೆಸಿದ ನರೇಂದ್ರಮೋದಿ ಸರ್ಕಾರವನ್ನು ಜನತೆ ಸಾರಸಗಾಟಾಗಿ ತಿರಸ್ಕರಿಸಿದ್ದಾರೆ. ಆಡಳಿತ ಪಕ್ಷದ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವದ ವಿರೋಧಿ ಧೋರಣೆಗಳಿಗಾಗಿ ಜನತೆ ನೀಡಿರುವ ತೀರ್ಪನ್ನು ನಾವು ವಿನಮ್ರವಾಗಿ ಗೌರವಿಸುತ್ತೇವೆ ಎಂದ ಅವರು ಎಸ್ಸಿ-ಎಸ್ಟಿ , ಓಬಿಸಿ, ಅಲ್ಪಸಂಖ್ಯಾತ ಪ್ರಾಬಲ್ಯವಿರುವ ಕಡೆಯೂ ನಾವು ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಕಾಂಗ್ರೆಸ್ ಮೇಲಿದೆ. ಕಾರ್ಯಕರ್ತರು ಇನ್ನಷ್ಟು ಶ್ರಮ ವಹಿಸಬೇಕು ಎಂದು ಕರೆ ಕೊಟ್ಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

9 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

9 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

9 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

10 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

10 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

10 hours ago