ದೇಶ- ವಿದೇಶ

ಲೋಕಸಭೆ ಫಲಿತಾಂಶ ಭಾರತ ಜೋಡೋ ಯಾತ್ರೆಯ ಫಲ: ಖರ್ಗೆ

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು(ಜೂ.8) ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲಾಗಿದೆ.

ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದೇಶದ ಲಕ್ಷಂತರ ಜನರ ಅಚಲ ನಿರ್ಧಾರದ ಬಗ್ಗೆ ಕೃತಜ್ಞತೆಗಳನ್ನು ಸಲ್ಲಿಸಿ ಮಾತು ಆರಂಭಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಸ್ತುತ ಲೋಕಸಭಾ ಚುನಾವಣೆಯ ಫಲಿತಾಂಶ ದೇಶ ವಿಭಜನೆ ಮತ್ತು ದ್ವೇಷ ಬಿತ್ತುವವರಿಗೆ ನೀಡಿದ ಜನಾದೇಶವಾಗಿದೆ. ನಾವು ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುವುದನ್ನು ಮುಂದುವರಿಸ ಬೇಕು ಎಂದು ಕರೆ ಕೊಟ್ಟಿದ್ದಾರೆ.

ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಎಂಬುದನ್ನು ಜನತೆ ತೋರಿಸಿಕೊಟ್ಟಿದ್ದಾರೆ. ನಾವು ಸಂಘಟಿತರಾಗಿ ಹೋರಾಟ ನಡೆಸಿದರೆ ಎಂತಹ ವಿಭಜಕ ಶಕ್ತಿಗಳನ್ನು ಮಣಿಸುವ ಶಕ್ತಿ ಇದೆ ಎಂಬುದಕ್ಕೆ ಫಲಿತಾಂಶವೇ ಸಾಕ್ಷಿ. ನಾವು ಇನ್ನಷ್ಟು ಒಗ್ಗಟ್ಟಿನಿಂದ ಶ್ರಮ ಹಾಕಿದ್ದರೆ ನಮಗೆ ಮತ್ತಷ್ಟು ಸ್ಥಾನಗಳು ಬರುತ್ತಿದ್ದವು. ಶೇಕಡವಾರು ಮತದಾನದಲ್ಲಿ ನಾವು ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಮಣಿಪುರದಲ್ಲಿ 2 ಸ್ಥಾನ, ನಾಗಲ್ಯಾಂಡ್ ಅಸ್ಸಾಂ, ಮೇಘಾಲಯದಲ್ಲಿ ನಾವು ಹೆಚ್ಚಿನ ಸ್ಥಾನ ಗೆದ್ದಿದ್ದೇವೆ. ಅಷ್ಟೇ ಏಕೆ ಮಹಾರಾಷ್ಟ್ರದಲ್ಲೂ ಆಡಳಿತ ಪಕ್ಷವನ್ನು ಮೆಟ್ಟಿ ನಾವು ದೊಡ್ಡ ಪಕ್ಷವಾಗಿ ಹೊರಹೊಮಿದ್ದೇವೆ. ಪ್ರಜಾಪ್ರಭುತ್ವದ ಉಳಿವು, ಸಂವಿಧಾನ ರಕ್ಷಣೆಗಾಗಿ ಎಲ್ಲ ವರ್ಗದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದು ಬರುವ ದಿನಗಳಲ್ಲಿ ಕಾಂಗ್ರೆಸ್ ಮೈತ್ರಿಕೂಟವಾದ ಇಂಡಿಯಾ ಬಣಕ್ಕೆ ಶುಭದಾಯಕದ ಮುನ್ಸೂಚನೆ ಎಂದು ಖರ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ್‌ ಜೋಡೋ ಯಾತ್ರೆಯ ಪ್ರಭಾವವನ್ನು ಎತ್ತಿ ಹಿಡಿದ ಖರ್ಗೆ ಅವರು, ಯಾತ್ರೆ ನಡೆದ ಸ್ಥಳಗಳಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಿಸಿದೆ. ಸಂವಿಧಾನ, ಆರ್ಥಿಕ ಸಮಾನತೆ, ನಿರುದ್ಯೋಗ ಸಮಸ್ಯೆಗಳನ್ನು ಎತ್ತಿ ದೇಶದ ಜನತೆಗೆ ರಾಹುಲ್‌ ಅವರು ಅರಿವು ಮೂಡಿಸಿದ್ದಾರೆ ಎಂದು ರಾಹುಲ್‌ ಗಾಂಧಿಯನ್ನು ಅಭಿನಂಧಿಸಿದರು.

ಕೇಂದ್ರದಲ್ಲಿ ಕಳೆದ 10 ವರ್ಷಗಳ ಕಾಲ ಅಧಿಕಾರ ನಡೆಸಿದ ನರೇಂದ್ರಮೋದಿ ಸರ್ಕಾರವನ್ನು ಜನತೆ ಸಾರಸಗಾಟಾಗಿ ತಿರಸ್ಕರಿಸಿದ್ದಾರೆ. ಆಡಳಿತ ಪಕ್ಷದ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವದ ವಿರೋಧಿ ಧೋರಣೆಗಳಿಗಾಗಿ ಜನತೆ ನೀಡಿರುವ ತೀರ್ಪನ್ನು ನಾವು ವಿನಮ್ರವಾಗಿ ಗೌರವಿಸುತ್ತೇವೆ ಎಂದ ಅವರು ಎಸ್ಸಿ-ಎಸ್ಟಿ , ಓಬಿಸಿ, ಅಲ್ಪಸಂಖ್ಯಾತ ಪ್ರಾಬಲ್ಯವಿರುವ ಕಡೆಯೂ ನಾವು ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಕಾಂಗ್ರೆಸ್ ಮೇಲಿದೆ. ಕಾರ್ಯಕರ್ತರು ಇನ್ನಷ್ಟು ಶ್ರಮ ವಹಿಸಬೇಕು ಎಂದು ಕರೆ ಕೊಟ್ಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

2 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

2 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

2 hours ago