ದೇಶ- ವಿದೇಶ

ಲೋಕಸಭೆ ಫಲಿತಾಂಶ ಭಾರತ ಜೋಡೋ ಯಾತ್ರೆಯ ಫಲ: ಖರ್ಗೆ

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು(ಜೂ.8) ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲಾಗಿದೆ.

ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದೇಶದ ಲಕ್ಷಂತರ ಜನರ ಅಚಲ ನಿರ್ಧಾರದ ಬಗ್ಗೆ ಕೃತಜ್ಞತೆಗಳನ್ನು ಸಲ್ಲಿಸಿ ಮಾತು ಆರಂಭಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಸ್ತುತ ಲೋಕಸಭಾ ಚುನಾವಣೆಯ ಫಲಿತಾಂಶ ದೇಶ ವಿಭಜನೆ ಮತ್ತು ದ್ವೇಷ ಬಿತ್ತುವವರಿಗೆ ನೀಡಿದ ಜನಾದೇಶವಾಗಿದೆ. ನಾವು ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುವುದನ್ನು ಮುಂದುವರಿಸ ಬೇಕು ಎಂದು ಕರೆ ಕೊಟ್ಟಿದ್ದಾರೆ.

ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಎಂಬುದನ್ನು ಜನತೆ ತೋರಿಸಿಕೊಟ್ಟಿದ್ದಾರೆ. ನಾವು ಸಂಘಟಿತರಾಗಿ ಹೋರಾಟ ನಡೆಸಿದರೆ ಎಂತಹ ವಿಭಜಕ ಶಕ್ತಿಗಳನ್ನು ಮಣಿಸುವ ಶಕ್ತಿ ಇದೆ ಎಂಬುದಕ್ಕೆ ಫಲಿತಾಂಶವೇ ಸಾಕ್ಷಿ. ನಾವು ಇನ್ನಷ್ಟು ಒಗ್ಗಟ್ಟಿನಿಂದ ಶ್ರಮ ಹಾಕಿದ್ದರೆ ನಮಗೆ ಮತ್ತಷ್ಟು ಸ್ಥಾನಗಳು ಬರುತ್ತಿದ್ದವು. ಶೇಕಡವಾರು ಮತದಾನದಲ್ಲಿ ನಾವು ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಮಣಿಪುರದಲ್ಲಿ 2 ಸ್ಥಾನ, ನಾಗಲ್ಯಾಂಡ್ ಅಸ್ಸಾಂ, ಮೇಘಾಲಯದಲ್ಲಿ ನಾವು ಹೆಚ್ಚಿನ ಸ್ಥಾನ ಗೆದ್ದಿದ್ದೇವೆ. ಅಷ್ಟೇ ಏಕೆ ಮಹಾರಾಷ್ಟ್ರದಲ್ಲೂ ಆಡಳಿತ ಪಕ್ಷವನ್ನು ಮೆಟ್ಟಿ ನಾವು ದೊಡ್ಡ ಪಕ್ಷವಾಗಿ ಹೊರಹೊಮಿದ್ದೇವೆ. ಪ್ರಜಾಪ್ರಭುತ್ವದ ಉಳಿವು, ಸಂವಿಧಾನ ರಕ್ಷಣೆಗಾಗಿ ಎಲ್ಲ ವರ್ಗದ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದು ಬರುವ ದಿನಗಳಲ್ಲಿ ಕಾಂಗ್ರೆಸ್ ಮೈತ್ರಿಕೂಟವಾದ ಇಂಡಿಯಾ ಬಣಕ್ಕೆ ಶುಭದಾಯಕದ ಮುನ್ಸೂಚನೆ ಎಂದು ಖರ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ್‌ ಜೋಡೋ ಯಾತ್ರೆಯ ಪ್ರಭಾವವನ್ನು ಎತ್ತಿ ಹಿಡಿದ ಖರ್ಗೆ ಅವರು, ಯಾತ್ರೆ ನಡೆದ ಸ್ಥಳಗಳಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಿಸಿದೆ. ಸಂವಿಧಾನ, ಆರ್ಥಿಕ ಸಮಾನತೆ, ನಿರುದ್ಯೋಗ ಸಮಸ್ಯೆಗಳನ್ನು ಎತ್ತಿ ದೇಶದ ಜನತೆಗೆ ರಾಹುಲ್‌ ಅವರು ಅರಿವು ಮೂಡಿಸಿದ್ದಾರೆ ಎಂದು ರಾಹುಲ್‌ ಗಾಂಧಿಯನ್ನು ಅಭಿನಂಧಿಸಿದರು.

ಕೇಂದ್ರದಲ್ಲಿ ಕಳೆದ 10 ವರ್ಷಗಳ ಕಾಲ ಅಧಿಕಾರ ನಡೆಸಿದ ನರೇಂದ್ರಮೋದಿ ಸರ್ಕಾರವನ್ನು ಜನತೆ ಸಾರಸಗಾಟಾಗಿ ತಿರಸ್ಕರಿಸಿದ್ದಾರೆ. ಆಡಳಿತ ಪಕ್ಷದ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವದ ವಿರೋಧಿ ಧೋರಣೆಗಳಿಗಾಗಿ ಜನತೆ ನೀಡಿರುವ ತೀರ್ಪನ್ನು ನಾವು ವಿನಮ್ರವಾಗಿ ಗೌರವಿಸುತ್ತೇವೆ ಎಂದ ಅವರು ಎಸ್ಸಿ-ಎಸ್ಟಿ , ಓಬಿಸಿ, ಅಲ್ಪಸಂಖ್ಯಾತ ಪ್ರಾಬಲ್ಯವಿರುವ ಕಡೆಯೂ ನಾವು ಹೆಚ್ಚಿನ ಸ್ಥಾನ ಗಳಿಸಿದ್ದೇವೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಕಾಂಗ್ರೆಸ್ ಮೇಲಿದೆ. ಕಾರ್ಯಕರ್ತರು ಇನ್ನಷ್ಟು ಶ್ರಮ ವಹಿಸಬೇಕು ಎಂದು ಕರೆ ಕೊಟ್ಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago