ನವದೆಹಲಿ: ನಾಳೆ ಲೋಕಸಭಾ ಸ್ಪೀಕರ್ ಆಯ್ಕೆ ಸಂಬಂಧ ಚುನಾವಣೆ ನಡೆಯಲಿದ್ದು, ಎಲ್ಲಾ ಎನ್ಡಿಎ ನಾಯಕರಿಗೆ ವಿಪ್ ಜಾರಿ ಮಾಡಲಾಗಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಬಿಜೆಪಿಯ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಕಣಕ್ಕಿಳಿಸಿದ್ದು, ಇಂಡಿಯಾ ಒಕ್ಕೂಟ ಕಾಂಗ್ರೆಸ್ ನಾಯಕ ಕೆ.ಸುರೇಶ್ ಅವರನ್ನು ಕಣಕ್ಕಿಳಿಸಿದೆ.
ನಾಳೆ ಬೆಳಿಗ್ಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಎನ್ಡಿಎ ಗೆಲುವಿಗೆ ಸಾಕಷ್ಟು ಸಂಖ್ಯಾಬಲವಿದೆ. 18ನೇ ಲೋಕಸಭಾ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಮತ್ತು ಕಾಂಗ್ರೆಸ್ನ ಕೋಡಿಕುನ್ನಿಲ್ ಸುರೇಶ್ ಪರಸ್ಪರ ಮುಖಾಮುಖಿಯಾಗಲಿದ್ದಾರೆ.
ಇನ್ನೂ ನಾಳೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಎನ್ಡಿಎ ಸಂಸದರಿಗೆ ವಿಪ್ ಜಾರಿ ಮಾಡಲಾಗಿದ್ದು, ನಾಳೆ ಎಲ್ಲರೂ ಕಡ್ಡಾಯವಾಗಿ ಹಾಜರಾಗಲೇಬೇಕು ಎಂದು ಕಟ್ಟಾಜ್ಞೆ ಹೊರಡಿಸಲಾಗಿದೆ.
ಇನ್ನೂ ಚುನಾವಣೆ ಸಂಬಂಧ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಪಕ್ಷಗಳ ಜಂಟಿ ನಾಮನಿರ್ದೇಶಕರಾಗಿ ಕೆ.ಸುರೇಶ್ ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ನಮ್ಮ ಪಕ್ಷವನ್ನು ಯಾರೂ ಕೂಡ ಸಂಪರ್ಕಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಅಸಮಾಧಾನ ಹೊರಹಾಕಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…