ನವದೆಹಲಿ: ಬಡವರ ಮನೆಯಲ್ಲಿ ಫೋಟೋಶೂಟ್ ಮಾಡಿಸಿ ಕೆಲವರು ಮನರಂಜನೆ ತೆಗೆದುಕೊಳ್ಳುತ್ತಾರೆ. ಅವರಿಗೆ ಬಡವರ ಮಾತು ಬೋರ್ ಆಗಲಿದೆ. ನಾನು ಅವರ ಸಿಟ್ಟನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ನಾವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಯಸುತ್ತೇವೆ. ನಮ್ಮ ದೇಶದಲ್ಲಿ ಪ್ರಧಾನ ಮಂತ್ರಿ ಇದ್ದರು. ಅವರನ್ನು ಮಿಸ್ಟರ್ ಕ್ಲೀನ್ ಎಂದು ಕರೆಯಲಾಗುತ್ತಿತ್ತು. ಒಂದು ರೂಪಾಯಿ ಬಿಡುಗಡೆ ಮಾಡಿದರೆ ಬಡವರಿಗೆ 15 ಪೈಸೆ ತಲುಪುತ್ತದೆ ಎಂದು ಹೇಳಿದ್ದರು. ಎಲ್ಲಾ ಕಡೆ ಅವರದ್ದೇ ಸರ್ಕಾರ ಇದ್ದರೂ ಈ ಹೇಳಿಕೆ ನೀಡಿದ್ದರು. ಬಾಕಿ ಹಣ ಎಲ್ಲಿ ಹೋಗುತ್ತಿತ್ತು ಆ ಬಗ್ಗೆ ಜನರಿಗೆ ಗೊತ್ತಿದೆ. ಉಳಿತಾಯ ಮತ್ತು ಅಭಿವೃದ್ಧಿಯೇ ನಮ್ಮ ಧ್ಯೇಯ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಡವರಿಗೆ ಸುಳ್ಳಿನ ಘೋಷಣೆ ಅಲ್ಲ. ಸತ್ಯವಾದ ಅಭಿವೃದ್ಧಿ ನೀಡಿದ್ದೇವೆ. ಮಧ್ಯಮ ವರ್ಗದ ಕನಸು ಈಡೇರಿಸಿದ್ದೇವೆ. ಬಡವರಿಗೆ ಈವರೆಗೂ ನಾಲ್ಕು ಕೋಟೆ ಮನೆ ಸಿಕ್ಕಿದೆ. ಮಹಿಳೆಯರಿಗೆ 12 ಕೋಟಿಗೂ ಅಧಿಕ ಶೌಚಾಲಯ ನಿರ್ಮಾಣ ಮಾಡಿದ್ದೇವೆ. ಪ್ರತಿ ಮನೆಗೆ ಕುಡಿಯುವ ನೀರು ನೀಡುವುದು ನಮ್ಮ ಉದ್ದೇಶ. ಜಲ ಜೀವನ್ ಮಿಷನ್ ಅಡಿ 12 ಕುಟುಂಬಗಳಿಗೆ ಕುಡಿಯುವ ನೀರು ನೀಡಿದ್ದೇವೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…