ನವದೆಹಲಿ: ಬಡವರ ಮನೆಯಲ್ಲಿ ಫೋಟೋಶೂಟ್ ಮಾಡಿಸಿ ಕೆಲವರು ಮನರಂಜನೆ ತೆಗೆದುಕೊಳ್ಳುತ್ತಾರೆ. ಅವರಿಗೆ ಬಡವರ ಮಾತು ಬೋರ್ ಆಗಲಿದೆ. ನಾನು ಅವರ ಸಿಟ್ಟನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ನಾವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಯಸುತ್ತೇವೆ. ನಮ್ಮ ದೇಶದಲ್ಲಿ ಪ್ರಧಾನ ಮಂತ್ರಿ ಇದ್ದರು. ಅವರನ್ನು ಮಿಸ್ಟರ್ ಕ್ಲೀನ್ ಎಂದು ಕರೆಯಲಾಗುತ್ತಿತ್ತು. ಒಂದು ರೂಪಾಯಿ ಬಿಡುಗಡೆ ಮಾಡಿದರೆ ಬಡವರಿಗೆ 15 ಪೈಸೆ ತಲುಪುತ್ತದೆ ಎಂದು ಹೇಳಿದ್ದರು. ಎಲ್ಲಾ ಕಡೆ ಅವರದ್ದೇ ಸರ್ಕಾರ ಇದ್ದರೂ ಈ ಹೇಳಿಕೆ ನೀಡಿದ್ದರು. ಬಾಕಿ ಹಣ ಎಲ್ಲಿ ಹೋಗುತ್ತಿತ್ತು ಆ ಬಗ್ಗೆ ಜನರಿಗೆ ಗೊತ್ತಿದೆ. ಉಳಿತಾಯ ಮತ್ತು ಅಭಿವೃದ್ಧಿಯೇ ನಮ್ಮ ಧ್ಯೇಯ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಡವರಿಗೆ ಸುಳ್ಳಿನ ಘೋಷಣೆ ಅಲ್ಲ. ಸತ್ಯವಾದ ಅಭಿವೃದ್ಧಿ ನೀಡಿದ್ದೇವೆ. ಮಧ್ಯಮ ವರ್ಗದ ಕನಸು ಈಡೇರಿಸಿದ್ದೇವೆ. ಬಡವರಿಗೆ ಈವರೆಗೂ ನಾಲ್ಕು ಕೋಟೆ ಮನೆ ಸಿಕ್ಕಿದೆ. ಮಹಿಳೆಯರಿಗೆ 12 ಕೋಟಿಗೂ ಅಧಿಕ ಶೌಚಾಲಯ ನಿರ್ಮಾಣ ಮಾಡಿದ್ದೇವೆ. ಪ್ರತಿ ಮನೆಗೆ ಕುಡಿಯುವ ನೀರು ನೀಡುವುದು ನಮ್ಮ ಉದ್ದೇಶ. ಜಲ ಜೀವನ್ ಮಿಷನ್ ಅಡಿ 12 ಕುಟುಂಬಗಳಿಗೆ ಕುಡಿಯುವ ನೀರು ನೀಡಿದ್ದೇವೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…