ದೇಶ- ವಿದೇಶ

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಾತು: ರಾಹುಲ್‌ ಗಾಂಧಿ ವಿರುದ್ಧ ಆಕ್ರೋಶ

ನವದೆಹಲಿ: ಬಡವರ ಮನೆಯಲ್ಲಿ ಫೋಟೋಶೂಟ್‌ ಮಾಡಿಸಿ ಕೆಲವರು ಮನರಂಜನೆ ತೆಗೆದುಕೊಳ್ಳುತ್ತಾರೆ. ಅವರಿಗೆ ಬಡವರ ಮಾತು ಬೋರ್‌ ಆಗಲಿದೆ. ನಾನು ಅವರ ಸಿಟ್ಟನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಹೇಳುವ ಮೂಲಕ ರಾಹುಲ್‌ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಟಾಂಗ್‌ ನೀಡಿದ್ದಾರೆ.

ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ನಾವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಯಸುತ್ತೇವೆ. ನಮ್ಮ ದೇಶದಲ್ಲಿ ಪ್ರಧಾನ ಮಂತ್ರಿ ಇದ್ದರು. ಅವರನ್ನು ಮಿಸ್ಟರ್‌ ಕ್ಲೀನ್‌ ಎಂದು ಕರೆಯಲಾಗುತ್ತಿತ್ತು. ಒಂದು ರೂಪಾಯಿ ಬಿಡುಗಡೆ ಮಾಡಿದರೆ ಬಡವರಿಗೆ 15 ಪೈಸೆ ತಲುಪುತ್ತದೆ ಎಂದು ಹೇಳಿದ್ದರು. ಎಲ್ಲಾ ಕಡೆ ಅವರದ್ದೇ ಸರ್ಕಾರ ಇದ್ದರೂ ಈ ಹೇಳಿಕೆ ನೀಡಿದ್ದರು. ಬಾಕಿ ಹಣ ಎಲ್ಲಿ ಹೋಗುತ್ತಿತ್ತು ಆ ಬಗ್ಗೆ ಜನರಿಗೆ ಗೊತ್ತಿದೆ. ಉಳಿತಾಯ ಮತ್ತು ಅಭಿವೃದ್ಧಿಯೇ ನಮ್ಮ ಧ್ಯೇಯ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಡವರಿಗೆ ಸುಳ್ಳಿನ ಘೋಷಣೆ ಅಲ್ಲ. ಸತ್ಯವಾದ ಅಭಿವೃದ್ಧಿ ನೀಡಿದ್ದೇವೆ. ಮಧ್ಯಮ ವರ್ಗದ ಕನಸು ಈಡೇರಿಸಿದ್ದೇವೆ. ಬಡವರಿಗೆ ಈವರೆಗೂ ನಾಲ್ಕು ಕೋಟೆ ಮನೆ ಸಿಕ್ಕಿದೆ. ಮಹಿಳೆಯರಿಗೆ 12 ಕೋಟಿಗೂ ಅಧಿಕ ಶೌಚಾಲಯ ನಿರ್ಮಾಣ ಮಾಡಿದ್ದೇವೆ. ಪ್ರತಿ ಮನೆಗೆ ಕುಡಿಯುವ ನೀರು ನೀಡುವುದು ನಮ್ಮ ಉದ್ದೇಶ. ಜಲ ಜೀವನ್‌ ಮಿಷನ್‌ ಅಡಿ 12 ಕುಟುಂಬಗಳಿಗೆ ಕುಡಿಯುವ ನೀರು ನೀಡಿದ್ದೇವೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

12 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago