ನವದೆಹಲಿ: ಬಡವರ ಮನೆಯಲ್ಲಿ ಫೋಟೋಶೂಟ್ ಮಾಡಿಸಿ ಕೆಲವರು ಮನರಂಜನೆ ತೆಗೆದುಕೊಳ್ಳುತ್ತಾರೆ. ಅವರಿಗೆ ಬಡವರ ಮಾತು ಬೋರ್ ಆಗಲಿದೆ. ನಾನು ಅವರ ಸಿಟ್ಟನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ನಾವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಯಸುತ್ತೇವೆ. ನಮ್ಮ ದೇಶದಲ್ಲಿ ಪ್ರಧಾನ ಮಂತ್ರಿ ಇದ್ದರು. ಅವರನ್ನು ಮಿಸ್ಟರ್ ಕ್ಲೀನ್ ಎಂದು ಕರೆಯಲಾಗುತ್ತಿತ್ತು. ಒಂದು ರೂಪಾಯಿ ಬಿಡುಗಡೆ ಮಾಡಿದರೆ ಬಡವರಿಗೆ 15 ಪೈಸೆ ತಲುಪುತ್ತದೆ ಎಂದು ಹೇಳಿದ್ದರು. ಎಲ್ಲಾ ಕಡೆ ಅವರದ್ದೇ ಸರ್ಕಾರ ಇದ್ದರೂ ಈ ಹೇಳಿಕೆ ನೀಡಿದ್ದರು. ಬಾಕಿ ಹಣ ಎಲ್ಲಿ ಹೋಗುತ್ತಿತ್ತು ಆ ಬಗ್ಗೆ ಜನರಿಗೆ ಗೊತ್ತಿದೆ. ಉಳಿತಾಯ ಮತ್ತು ಅಭಿವೃದ್ಧಿಯೇ ನಮ್ಮ ಧ್ಯೇಯ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಡವರಿಗೆ ಸುಳ್ಳಿನ ಘೋಷಣೆ ಅಲ್ಲ. ಸತ್ಯವಾದ ಅಭಿವೃದ್ಧಿ ನೀಡಿದ್ದೇವೆ. ಮಧ್ಯಮ ವರ್ಗದ ಕನಸು ಈಡೇರಿಸಿದ್ದೇವೆ. ಬಡವರಿಗೆ ಈವರೆಗೂ ನಾಲ್ಕು ಕೋಟೆ ಮನೆ ಸಿಕ್ಕಿದೆ. ಮಹಿಳೆಯರಿಗೆ 12 ಕೋಟಿಗೂ ಅಧಿಕ ಶೌಚಾಲಯ ನಿರ್ಮಾಣ ಮಾಡಿದ್ದೇವೆ. ಪ್ರತಿ ಮನೆಗೆ ಕುಡಿಯುವ ನೀರು ನೀಡುವುದು ನಮ್ಮ ಉದ್ದೇಶ. ಜಲ ಜೀವನ್ ಮಿಷನ್ ಅಡಿ 12 ಕುಟುಂಬಗಳಿಗೆ ಕುಡಿಯುವ ನೀರು ನೀಡಿದ್ದೇವೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…