ನವದೆಹಲಿ: ಸುಪ್ರೀಂಕೋರ್ಟ್ ಮಾರ್ಚ್.18 ರಂದು ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ವಿರುದ್ಧದ ಲೋಕಪಾಲ ಆದೇಶಕ್ಕೆ ತಡೆ ನೀಡಿರುವ ಸ್ವಯಂಪ್ರೇರಿತ ದೂರಿನ ಅರ್ಜಿ ವಿಚಾರಣೆಯನ್ನು ಮಾಡಲಿದೆ.
ಈ ಅರ್ಜಿಯನ್ನು ಅಂದು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಅಭಯ್ ಎಸ್.ಓಕಾ ಮತ್ತು ಸೂರ್ಯಕಾಂತ್ ಅವರ ವಿಶೇಷ ನ್ಯಾಯಪೀಠವೂ ವಿಚಾರಣೆ ನಡೆಸಲಿದೆ ಎಂ ಮಾಹಿತಿ ಲಭ್ಯವಾಗಿದೆ.
ಸುಪ್ರೀಂಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಲೋಕಪಾಲ ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಆದರೆ ಫೆಬ್ರವರಿ.20ರಂದು ಲೋಕಪಾಲ ಆದೇಶಕ್ಕೆ ತಡೆ ನೀಡಿತ್ತು.
ಇನ್ನು ಕೇಂದ್ರ ಸರ್ಕಾರ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಲೋಕಪಾಳ ರಿಜಿಸ್ಟ್ರಾರ್ ಮತ್ತು ಹೈಕೋರ್ಟ್ನ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ದೂರು ಸಲ್ಲಿಸಿರುವ ವ್ಯಕ್ತಿಗೂ ಸಮನ್ಸ್ ಜಾರಿ ಮಾಡಿತ್ತು.
ಏನಿದು ಪ್ರಕರಣ?
ದೂರುದಾರನ ವಿರುದ್ಧ ಖಾಸಗಿ ಕಂಪೆನಿಯೊಂದು ದಾಖಲಿಸಿ, ಈ ದೇಶದ ಹೈಕೋರ್ಟ್ವೊಂದರ ನ್ಯಾಯಮೂರ್ತಿ ಒಬ್ಬರು ಅರ್ಜಿ ವಿಚಾರಣೆಯನ್ನು ನಡೆಸಬೇಕಿತ್ತು. ಆದರೆ ಹೈಕೋರ್ಟ್ನ ನ್ಯಾಯಮೂರ್ತಿ ಒಬ್ಬರು ಆ ಖಾಸಗಿ ಕಂಪೆನಿಗೆ ಅನುಕೂಲ ಮಾಡಕೊಡುವ ಸಲುವಾಗಿ ಜಿಲ್ಲಾ ನ್ಯಾಯಾಲಯವೊಂದ ಹೆಚ್ಚುವರಿ ನ್ಯಾಯಾಧೀಶ ಮತ್ತು ಅರ್ಜಿ ವಿಚಾರಣೆ ನಡೆಸಬೇಕಿದ್ದ ಹೈಕೋರ್ಟ್ನ ನ್ಯಾಯಮೂರ್ತಿಯ ಮೇಲೆ ಪ್ರಭಾವ ಬೀರಿದ್ದರು ಎಂದು ಆರೋಪಿಸಿ ಅರ್ಜಿದಾರ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದರು.
ಈ ದೂರುಗಳನ್ನು ಪರಿಗಣಿಸಿದ ಲೋಕಪಾಲ ಸಂಸ್ಥೆಯೂ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ಜನವರಿ.27ರಂದು ಆದೇಶ ನೀಡಿತ್ತು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…