ನವದೆಹಲಿ: ಸುಪ್ರೀಂಕೋರ್ಟ್ ಮಾರ್ಚ್.18 ರಂದು ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ವಿರುದ್ಧದ ಲೋಕಪಾಲ ಆದೇಶಕ್ಕೆ ತಡೆ ನೀಡಿರುವ ಸ್ವಯಂಪ್ರೇರಿತ ದೂರಿನ ಅರ್ಜಿ ವಿಚಾರಣೆಯನ್ನು ಮಾಡಲಿದೆ.
ಈ ಅರ್ಜಿಯನ್ನು ಅಂದು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಅಭಯ್ ಎಸ್.ಓಕಾ ಮತ್ತು ಸೂರ್ಯಕಾಂತ್ ಅವರ ವಿಶೇಷ ನ್ಯಾಯಪೀಠವೂ ವಿಚಾರಣೆ ನಡೆಸಲಿದೆ ಎಂ ಮಾಹಿತಿ ಲಭ್ಯವಾಗಿದೆ.
ಸುಪ್ರೀಂಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಲೋಕಪಾಲ ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಆದರೆ ಫೆಬ್ರವರಿ.20ರಂದು ಲೋಕಪಾಲ ಆದೇಶಕ್ಕೆ ತಡೆ ನೀಡಿತ್ತು.
ಇನ್ನು ಕೇಂದ್ರ ಸರ್ಕಾರ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಲೋಕಪಾಳ ರಿಜಿಸ್ಟ್ರಾರ್ ಮತ್ತು ಹೈಕೋರ್ಟ್ನ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ದೂರು ಸಲ್ಲಿಸಿರುವ ವ್ಯಕ್ತಿಗೂ ಸಮನ್ಸ್ ಜಾರಿ ಮಾಡಿತ್ತು.
ಏನಿದು ಪ್ರಕರಣ?
ದೂರುದಾರನ ವಿರುದ್ಧ ಖಾಸಗಿ ಕಂಪೆನಿಯೊಂದು ದಾಖಲಿಸಿ, ಈ ದೇಶದ ಹೈಕೋರ್ಟ್ವೊಂದರ ನ್ಯಾಯಮೂರ್ತಿ ಒಬ್ಬರು ಅರ್ಜಿ ವಿಚಾರಣೆಯನ್ನು ನಡೆಸಬೇಕಿತ್ತು. ಆದರೆ ಹೈಕೋರ್ಟ್ನ ನ್ಯಾಯಮೂರ್ತಿ ಒಬ್ಬರು ಆ ಖಾಸಗಿ ಕಂಪೆನಿಗೆ ಅನುಕೂಲ ಮಾಡಕೊಡುವ ಸಲುವಾಗಿ ಜಿಲ್ಲಾ ನ್ಯಾಯಾಲಯವೊಂದ ಹೆಚ್ಚುವರಿ ನ್ಯಾಯಾಧೀಶ ಮತ್ತು ಅರ್ಜಿ ವಿಚಾರಣೆ ನಡೆಸಬೇಕಿದ್ದ ಹೈಕೋರ್ಟ್ನ ನ್ಯಾಯಮೂರ್ತಿಯ ಮೇಲೆ ಪ್ರಭಾವ ಬೀರಿದ್ದರು ಎಂದು ಆರೋಪಿಸಿ ಅರ್ಜಿದಾರ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದರು.
ಈ ದೂರುಗಳನ್ನು ಪರಿಗಣಿಸಿದ ಲೋಕಪಾಲ ಸಂಸ್ಥೆಯೂ ಹಾಲಿ ಹೆಚ್ಚುವರಿ ನ್ಯಾಯಮೂರ್ತಿ ವಿರುದ್ಧ ಜನವರಿ.27ರಂದು ಆದೇಶ ನೀಡಿತ್ತು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…