ಮಣಿಪುರ: ಏಪ್ರಿಲ್ 19ರಂದು ನಡೆದಿದ್ದ ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಿಗೆ ಇದೇ ಏ.22 ರಂದು ಮರು ಮತದಾನ ನಡೆಯಲಿದೆ. ಮತದಾನದ ವೇಳೆ ಬೂತ್ಗಳಿಗೆ ಬೆಂಕಿ ಹಚ್ಚಿ ವಿದ್ವಂಸಕ ಕೃತ್ಯಗಳನ್ನು ನಡೆಸಿದ ಪರಿಣಾಮ ಚುನಾವಣಾ ಆಯೋಗ ಮರು ಮತದಾನ ನಡೆಸುವಂತೆ ಆದೇಶ ಹೊರಡಿಸಿದೆ.
ಏಪ್ರಿಲ್ 19 ರಂದು ಮಣಿಪುರದಲ್ಲಿನ ಸಜೆಬ್, ಖುರೈ, ತೊಂಗಮ್, ಲೈಕೈ ಬಮನ್ ಕಂಪು (ಉತ್ತರ-ಎ), ಬಮನ್ ಕಂಪು (ಉತ್ತರ-ಬಿ), ಬಮನ್ ಕಂಪು (ಆಗ್ನೇಯ-ಪಶ್ಚಿಮ), ಬಮನ್ ಕಂಪು (ಆಗ್ನೇಯ), ಖೋಂಗ್ಮನ್ ವಲಯ-ವಿ (ಎ), ಇರೊಯಿಶೆಂಬಾ , ಇರೊಯಿಶೆಂಬಾ ಮಾಮಾಂಗ್ ಲೈಕೈ, ಇರೊಯಿಶೆಂಬಾ ಮಾಯೈ ಲೈಕೈ ಮತ್ತು ಖೈದೆಮ್ ಮಖಾ ಒಳಗೊಂಡಂತೆ ಒಟ್ಟು 11 ಮತಗಟ್ಟೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ಬಿಷ್ಣುಪುರ್ ಜಿಲ್ಲೆಯ ಥಮನ್ಪೋಕ್ಪಿಯಲ್ಲಿರುವ ಮತಗಟ್ಟೆ ಕೇಂದ್ರದ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ಹಿಂಸಾಚಾರ ಮನಗಂಡ ಆಯೋಗ 11 ಮತಗಟ್ಟೆಗಳ ಮತಗಳನ್ನು ಅಸಿಂಧು ಎಂದು ಘೋಷಿಸಿತ್ತು.
ಮಣಿಪುರದಲ್ಲಿ ಮತದಾನದ ವೇಳೆ ನಡೆದ ಹಿಂಸಾಚಾರಕ್ಕೆ ಸಬಂಧಿಸಿದಂತೆ ರಾಜ್ಯದ 47 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗ 11 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಕಲ್ಪಿಸಿ ಆದೇಶ ನೀಡಿದೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…