ದೇಶ- ವಿದೇಶ

ಲೋಕ ಸಮರ 2024: ಏ.22ರಂದು ಮಣಿಪುರದ 11 ಮತಗಟ್ಟೆಗಳಿಗೆ ಮರು ಮತದಾನ!

ಮಣಿಪುರ: ಏಪ್ರಿಲ್‌ 19ರಂದು ನಡೆದಿದ್ದ ಮಣಿಪುರದ ಇನ್ನರ್‌ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಿಗೆ ಇದೇ ಏ.22 ರಂದು ಮರು ಮತದಾನ ನಡೆಯಲಿದೆ. ಮತದಾನದ ವೇಳೆ ಬೂತ್‌ಗಳಿಗೆ ಬೆಂಕಿ ಹಚ್ಚಿ ವಿದ್ವಂಸಕ ಕೃತ್ಯಗಳನ್ನು ನಡೆಸಿದ ಪರಿಣಾಮ ಚುನಾವಣಾ ಆಯೋಗ ಮರು ಮತದಾನ ನಡೆಸುವಂತೆ ಆದೇಶ ಹೊರಡಿಸಿದೆ.

ಏಪ್ರಿಲ್‌ 19 ರಂದು ಮಣಿಪುರದಲ್ಲಿನ ಸಜೆಬ್, ಖುರೈ, ತೊಂಗಮ್, ಲೈಕೈ ಬಮನ್ ಕಂಪು (ಉತ್ತರ-ಎ), ಬಮನ್ ಕಂಪು (ಉತ್ತರ-ಬಿ), ಬಮನ್ ಕಂಪು (ಆಗ್ನೇಯ-ಪಶ್ಚಿಮ), ಬಮನ್ ಕಂಪು (ಆಗ್ನೇಯ), ಖೋಂಗ್‌ಮನ್ ವಲಯ-ವಿ (ಎ), ಇರೊಯಿಶೆಂಬಾ , ಇರೊಯಿಶೆಂಬಾ ಮಾಮಾಂಗ್ ಲೈಕೈ, ಇರೊಯಿಶೆಂಬಾ ಮಾಯೈ ಲೈಕೈ ಮತ್ತು ಖೈದೆಮ್ ಮಖಾ ಒಳಗೊಂಡಂತೆ ಒಟ್ಟು 11 ಮತಗಟ್ಟೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.

ಬಿಷ್ಣುಪುರ್ ಜಿಲ್ಲೆಯ ಥಮನ್‌ಪೋಕ್ಪಿಯಲ್ಲಿರುವ ಮತಗಟ್ಟೆ ಕೇಂದ್ರದ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ಹಿಂಸಾಚಾರ ಮನಗಂಡ ಆಯೋಗ 11 ಮತಗಟ್ಟೆಗಳ ಮತಗಳನ್ನು ಅಸಿಂಧು ಎಂದು ಘೋಷಿಸಿತ್ತು.

ಮಣಿಪುರದಲ್ಲಿ ಮತದಾನದ ವೇಳೆ ನಡೆದ ಹಿಂಸಾಚಾರಕ್ಕೆ ಸಬಂಧಿಸಿದಂತೆ ರಾಜ್ಯದ 47 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗ 11 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಕಲ್ಪಿಸಿ ಆದೇಶ ನೀಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

43 mins ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

3 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

3 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

3 hours ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

14 hours ago