ಮಣಿಪುರ: ಏಪ್ರಿಲ್ 19ರಂದು ನಡೆದಿದ್ದ ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಿಗೆ ಇದೇ ಏ.22 ರಂದು ಮರು ಮತದಾನ ನಡೆಯಲಿದೆ. ಮತದಾನದ ವೇಳೆ ಬೂತ್ಗಳಿಗೆ ಬೆಂಕಿ ಹಚ್ಚಿ ವಿದ್ವಂಸಕ ಕೃತ್ಯಗಳನ್ನು ನಡೆಸಿದ ಪರಿಣಾಮ ಚುನಾವಣಾ ಆಯೋಗ ಮರು ಮತದಾನ ನಡೆಸುವಂತೆ ಆದೇಶ ಹೊರಡಿಸಿದೆ.
ಏಪ್ರಿಲ್ 19 ರಂದು ಮಣಿಪುರದಲ್ಲಿನ ಸಜೆಬ್, ಖುರೈ, ತೊಂಗಮ್, ಲೈಕೈ ಬಮನ್ ಕಂಪು (ಉತ್ತರ-ಎ), ಬಮನ್ ಕಂಪು (ಉತ್ತರ-ಬಿ), ಬಮನ್ ಕಂಪು (ಆಗ್ನೇಯ-ಪಶ್ಚಿಮ), ಬಮನ್ ಕಂಪು (ಆಗ್ನೇಯ), ಖೋಂಗ್ಮನ್ ವಲಯ-ವಿ (ಎ), ಇರೊಯಿಶೆಂಬಾ , ಇರೊಯಿಶೆಂಬಾ ಮಾಮಾಂಗ್ ಲೈಕೈ, ಇರೊಯಿಶೆಂಬಾ ಮಾಯೈ ಲೈಕೈ ಮತ್ತು ಖೈದೆಮ್ ಮಖಾ ಒಳಗೊಂಡಂತೆ ಒಟ್ಟು 11 ಮತಗಟ್ಟೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ಬಿಷ್ಣುಪುರ್ ಜಿಲ್ಲೆಯ ಥಮನ್ಪೋಕ್ಪಿಯಲ್ಲಿರುವ ಮತಗಟ್ಟೆ ಕೇಂದ್ರದ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ಹಿಂಸಾಚಾರ ಮನಗಂಡ ಆಯೋಗ 11 ಮತಗಟ್ಟೆಗಳ ಮತಗಳನ್ನು ಅಸಿಂಧು ಎಂದು ಘೋಷಿಸಿತ್ತು.
ಮಣಿಪುರದಲ್ಲಿ ಮತದಾನದ ವೇಳೆ ನಡೆದ ಹಿಂಸಾಚಾರಕ್ಕೆ ಸಬಂಧಿಸಿದಂತೆ ರಾಜ್ಯದ 47 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗ 11 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಕಲ್ಪಿಸಿ ಆದೇಶ ನೀಡಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…