ಮಣಿಪುರ: ಏಪ್ರಿಲ್ 19ರಂದು ನಡೆದಿದ್ದ ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಿಗೆ ಇದೇ ಏ.22 ರಂದು ಮರು ಮತದಾನ ನಡೆಯಲಿದೆ. ಮತದಾನದ ವೇಳೆ ಬೂತ್ಗಳಿಗೆ ಬೆಂಕಿ ಹಚ್ಚಿ ವಿದ್ವಂಸಕ ಕೃತ್ಯಗಳನ್ನು ನಡೆಸಿದ ಪರಿಣಾಮ ಚುನಾವಣಾ ಆಯೋಗ ಮರು ಮತದಾನ ನಡೆಸುವಂತೆ ಆದೇಶ ಹೊರಡಿಸಿದೆ.
ಏಪ್ರಿಲ್ 19 ರಂದು ಮಣಿಪುರದಲ್ಲಿನ ಸಜೆಬ್, ಖುರೈ, ತೊಂಗಮ್, ಲೈಕೈ ಬಮನ್ ಕಂಪು (ಉತ್ತರ-ಎ), ಬಮನ್ ಕಂಪು (ಉತ್ತರ-ಬಿ), ಬಮನ್ ಕಂಪು (ಆಗ್ನೇಯ-ಪಶ್ಚಿಮ), ಬಮನ್ ಕಂಪು (ಆಗ್ನೇಯ), ಖೋಂಗ್ಮನ್ ವಲಯ-ವಿ (ಎ), ಇರೊಯಿಶೆಂಬಾ , ಇರೊಯಿಶೆಂಬಾ ಮಾಮಾಂಗ್ ಲೈಕೈ, ಇರೊಯಿಶೆಂಬಾ ಮಾಯೈ ಲೈಕೈ ಮತ್ತು ಖೈದೆಮ್ ಮಖಾ ಒಳಗೊಂಡಂತೆ ಒಟ್ಟು 11 ಮತಗಟ್ಟೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ಬಿಷ್ಣುಪುರ್ ಜಿಲ್ಲೆಯ ಥಮನ್ಪೋಕ್ಪಿಯಲ್ಲಿರುವ ಮತಗಟ್ಟೆ ಕೇಂದ್ರದ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ಹಿಂಸಾಚಾರ ಮನಗಂಡ ಆಯೋಗ 11 ಮತಗಟ್ಟೆಗಳ ಮತಗಳನ್ನು ಅಸಿಂಧು ಎಂದು ಘೋಷಿಸಿತ್ತು.
ಮಣಿಪುರದಲ್ಲಿ ಮತದಾನದ ವೇಳೆ ನಡೆದ ಹಿಂಸಾಚಾರಕ್ಕೆ ಸಬಂಧಿಸಿದಂತೆ ರಾಜ್ಯದ 47 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗ 11 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಕಲ್ಪಿಸಿ ಆದೇಶ ನೀಡಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…