ಮಣಿಪುರ: ಏಪ್ರಿಲ್ 19ರಂದು ನಡೆದಿದ್ದ ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಿಗೆ ಇದೇ ಏ.22 ರಂದು ಮರು ಮತದಾನ ನಡೆಯಲಿದೆ. ಮತದಾನದ ವೇಳೆ ಬೂತ್ಗಳಿಗೆ ಬೆಂಕಿ ಹಚ್ಚಿ ವಿದ್ವಂಸಕ ಕೃತ್ಯಗಳನ್ನು ನಡೆಸಿದ ಪರಿಣಾಮ ಚುನಾವಣಾ ಆಯೋಗ ಮರು ಮತದಾನ ನಡೆಸುವಂತೆ ಆದೇಶ ಹೊರಡಿಸಿದೆ.
ಏಪ್ರಿಲ್ 19 ರಂದು ಮಣಿಪುರದಲ್ಲಿನ ಸಜೆಬ್, ಖುರೈ, ತೊಂಗಮ್, ಲೈಕೈ ಬಮನ್ ಕಂಪು (ಉತ್ತರ-ಎ), ಬಮನ್ ಕಂಪು (ಉತ್ತರ-ಬಿ), ಬಮನ್ ಕಂಪು (ಆಗ್ನೇಯ-ಪಶ್ಚಿಮ), ಬಮನ್ ಕಂಪು (ಆಗ್ನೇಯ), ಖೋಂಗ್ಮನ್ ವಲಯ-ವಿ (ಎ), ಇರೊಯಿಶೆಂಬಾ , ಇರೊಯಿಶೆಂಬಾ ಮಾಮಾಂಗ್ ಲೈಕೈ, ಇರೊಯಿಶೆಂಬಾ ಮಾಯೈ ಲೈಕೈ ಮತ್ತು ಖೈದೆಮ್ ಮಖಾ ಒಳಗೊಂಡಂತೆ ಒಟ್ಟು 11 ಮತಗಟ್ಟೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.
ಬಿಷ್ಣುಪುರ್ ಜಿಲ್ಲೆಯ ಥಮನ್ಪೋಕ್ಪಿಯಲ್ಲಿರುವ ಮತಗಟ್ಟೆ ಕೇಂದ್ರದ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ಹಿಂಸಾಚಾರ ಮನಗಂಡ ಆಯೋಗ 11 ಮತಗಟ್ಟೆಗಳ ಮತಗಳನ್ನು ಅಸಿಂಧು ಎಂದು ಘೋಷಿಸಿತ್ತು.
ಮಣಿಪುರದಲ್ಲಿ ಮತದಾನದ ವೇಳೆ ನಡೆದ ಹಿಂಸಾಚಾರಕ್ಕೆ ಸಬಂಧಿಸಿದಂತೆ ರಾಜ್ಯದ 47 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗ 11 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಕಲ್ಪಿಸಿ ಆದೇಶ ನೀಡಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…