ದೇಶ- ವಿದೇಶ

ಲೋಕ ಸಮರ 2024: ಏ.22ರಂದು ಮಣಿಪುರದ 11 ಮತಗಟ್ಟೆಗಳಿಗೆ ಮರು ಮತದಾನ!

ಮಣಿಪುರ: ಏಪ್ರಿಲ್‌ 19ರಂದು ನಡೆದಿದ್ದ ಮಣಿಪುರದ ಇನ್ನರ್‌ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಿಗೆ ಇದೇ ಏ.22 ರಂದು ಮರು ಮತದಾನ ನಡೆಯಲಿದೆ. ಮತದಾನದ ವೇಳೆ ಬೂತ್‌ಗಳಿಗೆ ಬೆಂಕಿ ಹಚ್ಚಿ ವಿದ್ವಂಸಕ ಕೃತ್ಯಗಳನ್ನು ನಡೆಸಿದ ಪರಿಣಾಮ ಚುನಾವಣಾ ಆಯೋಗ ಮರು ಮತದಾನ ನಡೆಸುವಂತೆ ಆದೇಶ ಹೊರಡಿಸಿದೆ.

ಏಪ್ರಿಲ್‌ 19 ರಂದು ಮಣಿಪುರದಲ್ಲಿನ ಸಜೆಬ್, ಖುರೈ, ತೊಂಗಮ್, ಲೈಕೈ ಬಮನ್ ಕಂಪು (ಉತ್ತರ-ಎ), ಬಮನ್ ಕಂಪು (ಉತ್ತರ-ಬಿ), ಬಮನ್ ಕಂಪು (ಆಗ್ನೇಯ-ಪಶ್ಚಿಮ), ಬಮನ್ ಕಂಪು (ಆಗ್ನೇಯ), ಖೋಂಗ್‌ಮನ್ ವಲಯ-ವಿ (ಎ), ಇರೊಯಿಶೆಂಬಾ , ಇರೊಯಿಶೆಂಬಾ ಮಾಮಾಂಗ್ ಲೈಕೈ, ಇರೊಯಿಶೆಂಬಾ ಮಾಯೈ ಲೈಕೈ ಮತ್ತು ಖೈದೆಮ್ ಮಖಾ ಒಳಗೊಂಡಂತೆ ಒಟ್ಟು 11 ಮತಗಟ್ಟೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು.

ಬಿಷ್ಣುಪುರ್ ಜಿಲ್ಲೆಯ ಥಮನ್‌ಪೋಕ್ಪಿಯಲ್ಲಿರುವ ಮತಗಟ್ಟೆ ಕೇಂದ್ರದ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ಹಿಂಸಾಚಾರ ಮನಗಂಡ ಆಯೋಗ 11 ಮತಗಟ್ಟೆಗಳ ಮತಗಳನ್ನು ಅಸಿಂಧು ಎಂದು ಘೋಷಿಸಿತ್ತು.

ಮಣಿಪುರದಲ್ಲಿ ಮತದಾನದ ವೇಳೆ ನಡೆದ ಹಿಂಸಾಚಾರಕ್ಕೆ ಸಬಂಧಿಸಿದಂತೆ ರಾಜ್ಯದ 47 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗ 11 ಮತಗಟ್ಟೆಗಳಿಗೆ ಮರು ಮತದಾನ ಮಾಡಲು ಅವಕಾಶ ಕಲ್ಪಿಸಿ ಆದೇಶ ನೀಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago