ದೇಶ- ವಿದೇಶ

ಲೋಕಸಭೆ ಚುನಾವಣೆ: ಡೂಡಲ್‌ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿದ ಗೂಗಲ್‌

ಮೈಸೂರು: ಇಂದು ( ಏಪ್ರಿಲ್‌ 19 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವಿಶ್ವದ ಬೃಹತ್‌ ಸರ್ಚ್‌ ಎಂಜಿನ್‌ ಗೂಗಲ್‌ ವಿಶೇಷ ಡೂಡಲ್‌ ರಚಿಸುವುದರ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಿದೆ.

ಗೂಗಲ್‌ ಮುಖಪುಟದಲ್ಲಿ ʼಗೂಗಲ್‌ʼ ನಡುವೆ ಕೈನ ತೋರುಬೆರಳಿಗೆ ಶಾಹಿ ಹಚ್ಚಿರುವ ಚಿತ್ರವನ್ನು ಬಳಸಿ ಡೂಡಲ್‌ ರಚಿಸಿದೆ. ಇನ್ನು ಗೂಗಲ್‌ ವಿಶೇಷ ದಿನಗಳಂದು ಇಂತಹ ವಿಶೇಷ ಡೂಡಲ್‌ ರಚಿಸುವ ಮೂಲಕ ಸಂಭ್ರಮಾಚರಣೆಯನ್ನು ಮಾಡುವುದು ಸಾಮಾನ್ಯ.

ಇನ್ನು ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಒಟ್ಟು 102 ಕ್ಷೇತ್ರಗಳ ಪೈಕಿ 101 ಕ್ಷೇತ್ರಗಳಲ್ಲಿ ಎನ್‌ಡಿಎ ಸ್ಪರ್ಧಿಸಿದ್ದು, ಐಎನ್‌ಡಿಐಎ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

4 mins ago

ಅಪ್ಪಂದಿರ ಬದಲು ತಾವೇ ನಾಯಕತ್ವ ಹೊರಲು ಸಜ್ಜಾದ ಪುತ್ರರು

ಕೆ.ಬಿ.ರಮೇಶನಾಯಕ ಈಗಾಗಲೇ ಜವಾಬ್ದಾರಿ ಹೊತ್ತಿರುವ ಡಾ.ಯತೀಂದ್ರ, ಸುನಿಲ್‌ಬೋಸ್, ಜಿ.ಡಿ.ಹರೀಶ್ ಗೌಡ ತಂದೆಯಂದಿರ ನಿಧನದಿಂದ ತೆರವಾದ ಸ್ಥಾನ ತುಂಬಿದ ಅನಿಲ್ ಚಿಕ್ಕಮಾದು,…

10 mins ago

ಮಂಡ್ಯ | ಜೈಲಿನಲ್ಲಿ ದುಡ್ಡು ಕೊಟ್ಟರೆ ರಾಜಾತಿಥ್ಯ ಆರೋಪ ; ಕಾರಾಗೃಹದ ಅದೀಕ್ಷಕಿ ವರ್ಗಾವಣೆ

ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…

9 hours ago

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

10 hours ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

11 hours ago