ಭಾಗಲ್ಪುರ್(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತವನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರದ ಭಾಗಲ್ಪುರದಲ್ಲಿ ಶನಿವಾರ ( ಏಪ್ರಿಲ್ 20 ) ನಡೆದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ-ಆರ್ಎಸ್ಎಸ್ ಸಂವಿಧಾನವನ್ನು ರದ್ದುಗೊಳಿಸಲು ಸಂಚು ರೂಪಿಸಿದೆ. ಭಾರತದ ಬಡವರು, ದಲಿತರು, ಬುಡಕಟ್ಟು ಸಮುದಾಯದವರಿಗೆ ದೊರಕಿರುವ ಸೌಲಭ್ಯಗಳೆಲ್ಲಾ ಸಂವಿಧಾನದಿಂದ ಬಂದದ್ದು, ಒಂದು ವೇಳೆ ಸಂವಿಧಾನವನ್ನು ಬದಲಾಯಿಸಿದರೆ ನಿಮ್ಮ ಸೌಲಭ್ಯಗಳೆಲ್ಲಾ ಕೊನೆಗೊಳ್ಳಲಿದೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು.
ಮೋದಿ ಸರ್ಕಾರ ದೇಶದ ಕೆಲವೇ ಕೆಲ ಶ್ರೀಮಂತರ ಪರವಾಗಿ ಇದೆ. ಇಡೀ ದೇಶದ ಸಂಪತ್ತು ಕೇವಲ 22 ಜನರಲ್ಲಿ ಇದೆ. ಇದನ್ನು ಬದಲಾಯಿಸಲು ನಾವು ಬಯಸುತ್ತೇವೆ ಎಂದರು. ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ. ಆದರೆ ವಾಸ್ತವವಾಗಿ 150 ಸ್ಥಾನಗಳನ್ನು ಅದು ಗೆಲ್ಲುವುದಿಲ್ಲ ಎಂದು ಹೇಳಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…