ದೇಶ- ವಿದೇಶ

ಇವಿಎಂನಲ್ಲಿ ದೋಷ: ಅಣುಕು ಮತದಾನದ ವೇಳೆ ಬಿಜೆಪಿಗೆ ಮತ ಆರೋಪ

ಕೇರಳ: ಇಲ್ಲಿನ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ( ಏಪ್ರಿಲ್‌ 17 ) ನಡೆಸಲಾದ ಅಣುಕು ಮತದಾನದ ವೇಳೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ನಲ್ಲಿ ದಾಖಲಾದ ಮತವು ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಹೋಗುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಈ ಬಗ್ಗೆ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಯೋಗಕ್ಕೆ ದೂರು ನೀಡಿದೆ. ಅಣುಕು ಮತದಾನದ ವೇಳೆ ಎರಡು ಮೂರು ಮತಯಂತ್ರಗಳಲ್ಲಿ ಈ ರೀತಿಯ ದೋಷ ಕಂಡುಬಂದಿದೆ. ಈ ಸಂಬಂಧ ಚುನಾವಣೆ ಆಯೋಗಕ್ಕೆ ದೂರು ನೀಡುವುದಾಗಿ ಸಿಪಿಐ(ಎಂ) ಹಿರಿಯ ನಾಯಕ ಕೆ.ಪಿ ಸತೀಸ್‌ ಚಂದ್ರನ್‌ ಹೇಳಿದ್ದಾರೆ.

ಏಪ್ರಿಲ್‌ 16 ರಂದು ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ಸಿಪಿಐ(ಎಂ)ನಿಂದ ಎಂ.ವಿ ಬಾಲಕೃಷ್ಣನ್‌, ಕಾಂಗ್ರೆಸ್‌ನಿಂದ ಹಾಲಿ ಸಂಸದ ರಾಜಮೋಹನ್‌ ಉನ್ನಿತ್ತನ್‌ ಹಾಗೂ ಬಿಜೆಪಿಯಿಂದ ಎಂ.ಎಲ್‌ ಅಶ್ವಿನಿ ಕಣದಲ್ಲಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

3 hours ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

3 hours ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

3 hours ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

3 hours ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

13 hours ago