ದೇಶ- ವಿದೇಶ

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ ತ್ರಿಷಾ ಕೃಷ್ಣನ್ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ಕುರಿತು ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ.

ಭಾನುವಾರ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನೀಲಿ ಬಣ್ಣದ ರೇಷ್ಮೆ ಸೀರೆಯುಟ್ಟು ಆಗಮಿಸಿದ ತ್ರಿಷಾ ಎಲ್ಲರ ಗಮನ ಸೆಳೆದರು. ಸಮಾರಂಭದಲ್ಲಿ ಕ್ಲಿಕ್ಕಿಸಿಕೊಂಡ ಚಿತ್ರಗಳನ್ನು ಹಂಚಿಕೊಂಡಿರುವ ಅವರು, “ಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿ”( the love is always louder) ಎಂದು ಬರೆದುಕೊಂಡಿದ್ದಾರೆ.

ವಿಜಯ್‌ ಅವರು ಪ್ರಮಾಣ ವಚನ ಸ್ವೀಕರಿಸುವಾಗ ತಾಯಿ ಉಮಾ ಕೃಷ್ಣನ್ ಜೊತೆಗೂಡಿ ಆಗಮಿಸಿದ ತ್ರಿಷಾ, ವೇದಿಕೆಯ ಮುಂಭಾಗದ ಆಸನದಲ್ಲಿ ಕುಳಿತು ಪ್ರಮಾಣವಚನವನ್ನು ಕಣ್ಣು ತುಂಬಿಕೊಂಡರು.

ಸಮಾರಂಭದ ಬಳಿಕ ಎನ್‌ಡಿಟಿವಿ ಜೊತೆ ಮಾತನಾಡಿದ ತ್ರಿಷಾ, ‘ತುಂಬಾ ಖುಷಿಯಾಗಿದೆ, ಕಂಗ್ರಾಜುಲೇಷನ್ಸ್’ ಎಂದು ವಿಜಯ್‌ಗೆ ಶುಭ ಕೋರಿದರು. ಇದೇ ವೇಳೆ ‘ವಿಜಯ್‌ಗೆ ಬೆಂಬಲ ನೀಡಿದ ತಮಿಳುನಾಡು ಜನತೆಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದರು.

ʼಗಿಲ್ಲಿ’, ‘ತಿರುಪಾಚಿ’, ‘ಆದಿ’, ‘ಕುರುವಿ’, ‘ಲಿಯೋ’ ಚಿತ್ರಗಳಲ್ಲಿ ಜೊತೆಯಾಗಿ ನಟಿಸಿರುವ ವಿಜಯ್-ತ್ರಿಷಾ ತಮಿಳು ಚಿತ್ರರಂಗದ ಹಿಟ್ ಜೋಡಿ. ಇಬ್ಬರ ನಡುವೆ ಆತ್ಮೀಯ ಸ್ನೇಹ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಪ್ರಮಾಣವಚನ ಸಮಾರಂಭದಲ್ಲಿ ತ್ರಿಷಾ ಉಪಸ್ಥಿತಿ, ವಿಜಯ್ ಕುಟುಂಬದ ಜೊತೆಗಿನ ಒಡನಾಟ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಯಿತು.

108 ಸ್ಥಾನ ಗೆದ್ದು ಏಕೈಕ ದೊಡ್ಡ ಪಕ್ಷವಾದ ಟಿವಿಕೆ, ಕಾಂಗ್ರೆಸ್ ಸೇರಿ ಮಿತ್ರಪಕ್ಷಗಳ ಬೆಂಬಲದೊಂದಿಗೆ 120 ಶಾಸಕರ ಬಲದಿಂದ ಸರ್ಕಾರ ರಚಿಸಿದೆ. ‘ಇದು ನಿಜವಾದ ಜಾತ್ಯತೀತ, ಸಾಮಾಜಿಕ ನ್ಯಾಯದ ಹೊಸ ಯುಗದ ಆರಂಭ’ ಎಂದು ವಿಜಯ್ ಮೊದಲ ಭಾಷಣದಲ್ಲಿ ಘೋಷಿಸಿದರು.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

4 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

5 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

6 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

7 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

7 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

8 hours ago