ದೇಶ- ವಿದೇಶ

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ ತ್ರಿಷಾ ಕೃಷ್ಣನ್ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ಕುರಿತು ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ.

ಭಾನುವಾರ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನೀಲಿ ಬಣ್ಣದ ರೇಷ್ಮೆ ಸೀರೆಯುಟ್ಟು ಆಗಮಿಸಿದ ತ್ರಿಷಾ ಎಲ್ಲರ ಗಮನ ಸೆಳೆದರು. ಸಮಾರಂಭದಲ್ಲಿ ಕ್ಲಿಕ್ಕಿಸಿಕೊಂಡ ಚಿತ್ರಗಳನ್ನು ಹಂಚಿಕೊಂಡಿರುವ ಅವರು, “ಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿ”( the love is always louder) ಎಂದು ಬರೆದುಕೊಂಡಿದ್ದಾರೆ.

ವಿಜಯ್‌ ಅವರು ಪ್ರಮಾಣ ವಚನ ಸ್ವೀಕರಿಸುವಾಗ ತಾಯಿ ಉಮಾ ಕೃಷ್ಣನ್ ಜೊತೆಗೂಡಿ ಆಗಮಿಸಿದ ತ್ರಿಷಾ, ವೇದಿಕೆಯ ಮುಂಭಾಗದ ಆಸನದಲ್ಲಿ ಕುಳಿತು ಪ್ರಮಾಣವಚನವನ್ನು ಕಣ್ಣು ತುಂಬಿಕೊಂಡರು.

ಸಮಾರಂಭದ ಬಳಿಕ ಎನ್‌ಡಿಟಿವಿ ಜೊತೆ ಮಾತನಾಡಿದ ತ್ರಿಷಾ, ‘ತುಂಬಾ ಖುಷಿಯಾಗಿದೆ, ಕಂಗ್ರಾಜುಲೇಷನ್ಸ್’ ಎಂದು ವಿಜಯ್‌ಗೆ ಶುಭ ಕೋರಿದರು. ಇದೇ ವೇಳೆ ‘ವಿಜಯ್‌ಗೆ ಬೆಂಬಲ ನೀಡಿದ ತಮಿಳುನಾಡು ಜನತೆಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದರು.

ʼಗಿಲ್ಲಿ’, ‘ತಿರುಪಾಚಿ’, ‘ಆದಿ’, ‘ಕುರುವಿ’, ‘ಲಿಯೋ’ ಚಿತ್ರಗಳಲ್ಲಿ ಜೊತೆಯಾಗಿ ನಟಿಸಿರುವ ವಿಜಯ್-ತ್ರಿಷಾ ತಮಿಳು ಚಿತ್ರರಂಗದ ಹಿಟ್ ಜೋಡಿ. ಇಬ್ಬರ ನಡುವೆ ಆತ್ಮೀಯ ಸ್ನೇಹ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಪ್ರಮಾಣವಚನ ಸಮಾರಂಭದಲ್ಲಿ ತ್ರಿಷಾ ಉಪಸ್ಥಿತಿ, ವಿಜಯ್ ಕುಟುಂಬದ ಜೊತೆಗಿನ ಒಡನಾಟ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಯಿತು.

108 ಸ್ಥಾನ ಗೆದ್ದು ಏಕೈಕ ದೊಡ್ಡ ಪಕ್ಷವಾದ ಟಿವಿಕೆ, ಕಾಂಗ್ರೆಸ್ ಸೇರಿ ಮಿತ್ರಪಕ್ಷಗಳ ಬೆಂಬಲದೊಂದಿಗೆ 120 ಶಾಸಕರ ಬಲದಿಂದ ಸರ್ಕಾರ ರಚಿಸಿದೆ. ‘ಇದು ನಿಜವಾದ ಜಾತ್ಯತೀತ, ಸಾಮಾಜಿಕ ನ್ಯಾಯದ ಹೊಸ ಯುಗದ ಆರಂಭ’ ಎಂದು ವಿಜಯ್ ಮೊದಲ ಭಾಷಣದಲ್ಲಿ ಘೋಷಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago