ದೇಶ- ವಿದೇಶ

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ

ಹೊಸದಿಲ್ಲಿ : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1723.50 ರೂ.ಗಳ ಬದಲಿಗೆ 1665 ರೂ.ಗಳಿಗೆ ಲಭ್ಯವಿರುತ್ತದೆ. ಅಂದರೆ, ಇಲ್ಲಿ 58.50 ರೂ.ಗಳ ಇಳಿಕೆ ಕಂಡುಬಂದಿದೆ. ಕೋಲ್ಕತ್ತಾದಲ್ಲಿ, ಇಂದಿನಿಂದ ವಾಣಿಜ್ಯ ಸಿಲಿಂಡರ್ 1769 ರೂ.ಗಳಿಗೆ ಲಭ್ಯವಿರುತ್ತದೆ.

ಮೊದಲು ಇದು 1826 ರೂ.ಗಳಿಗೆ ಲಭ್ಯವಿತ್ತು, ಈಗ ಅದು 57 ರೂ.ಗಳಷ್ಟು ಅಗ್ಗವಾಗಿದೆ. ಈಗ ಮುಂಬೈನಲ್ಲಿ ಈ ಸಿಲಿಂಡರ್ ದರ 1616 ರೂ. ಆಗಿದೆ. ಜೂನ್ ನಲ್ಲಿ ಇದು 1674.50 ರೂ. ಇತ್ತು. ಇದಕ್ಕೂ ಮೊದಲು, ಅಂದರೆ ಮೇ ತಿಂಗಳಲ್ಲಿ ಇದು 1699 ರೂ.ಗೆ ಲಭ್ಯವಿತ್ತು. ಇಲ್ಲಿ, ಪ್ರತಿ ಸಿಲಿಂಡರ್ ಗೆ 58.50 ರೂ. ಕಡಿತ ಮಾಡಲಾಗಿದೆ. ಚೆನ್ನೈ ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1823.50 ರೂ. ಆಗಿದೆ. ಜೂನ್ ನಲ್ಲಿ ಇದು 1881 ರೂ.ಗೆ ಲಭ್ಯವಿತ್ತು. ಜೂನ್ 2025, ಮೇ 2025, ಏಪ್ರಿಲ್ 2025 ರಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಗಳನ್ನು ಸಹ ಕಡಿಮೆ ಮಾಡಲಾಗಿತ್ತು.

ಜೂನ್ ತಿಂಗಳಲ್ಲಿ 24 ರೂ. ಇಳಿಕೆ ಕಂಡುಬಂದಿದೆ. ಮೇ ತಿಂಗಳಲ್ಲಿ 14.50 ರೂ. ಮತ್ತು ಏಪ್ರಿಲ್ ತಿಂಗಳಲ್ಲಿ 41 ರೂ. ಇಳಿಕೆ ಕಂಡುಬಂದಿದೆ. ಫೆಬ್ರವರಿಯಲ್ಲಿ 7 ರೂ. ಇಳಿಕೆ ಕಂಡುಬಂದಿದೆ, ಆದರೆ ಮಾರ್ಚ್‌ನಲ್ಲಿ 6 ರೂ. ಹೆಚ್ಚಳವಾಗಿದೆ. ಈಗ ಜುಲೈ ತಿಂಗಳಿನಲ್ಲಿಯೂ ದರಗಳನ್ನು ಕಡಿಮೆ ಮಾಡಲಾಗಿದೆ. ಜೂನ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1723.50 ರೂ.ಗೆ ಲಭ್ಯವಿತ್ತು. ಏಪ್ರಿಲ್‌ನಲ್ಲಿ ಇದರ ದರ 1762 ರೂ. ಇತ್ತು. ಮೇ ತಿಂಗಳಲ್ಲಿ ದರ 1747.50 ರೂ. ಇತ್ತು.

ಆಂದೋಲನ ಡೆಸ್ಕ್

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

17 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

41 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

59 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago