ದೇಶ- ವಿದೇಶ

ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ

ಹೊಸದಿಲ್ಲಿ : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1723.50 ರೂ.ಗಳ ಬದಲಿಗೆ 1665 ರೂ.ಗಳಿಗೆ ಲಭ್ಯವಿರುತ್ತದೆ. ಅಂದರೆ, ಇಲ್ಲಿ 58.50 ರೂ.ಗಳ ಇಳಿಕೆ ಕಂಡುಬಂದಿದೆ. ಕೋಲ್ಕತ್ತಾದಲ್ಲಿ, ಇಂದಿನಿಂದ ವಾಣಿಜ್ಯ ಸಿಲಿಂಡರ್ 1769 ರೂ.ಗಳಿಗೆ ಲಭ್ಯವಿರುತ್ತದೆ.

ಮೊದಲು ಇದು 1826 ರೂ.ಗಳಿಗೆ ಲಭ್ಯವಿತ್ತು, ಈಗ ಅದು 57 ರೂ.ಗಳಷ್ಟು ಅಗ್ಗವಾಗಿದೆ. ಈಗ ಮುಂಬೈನಲ್ಲಿ ಈ ಸಿಲಿಂಡರ್ ದರ 1616 ರೂ. ಆಗಿದೆ. ಜೂನ್ ನಲ್ಲಿ ಇದು 1674.50 ರೂ. ಇತ್ತು. ಇದಕ್ಕೂ ಮೊದಲು, ಅಂದರೆ ಮೇ ತಿಂಗಳಲ್ಲಿ ಇದು 1699 ರೂ.ಗೆ ಲಭ್ಯವಿತ್ತು. ಇಲ್ಲಿ, ಪ್ರತಿ ಸಿಲಿಂಡರ್ ಗೆ 58.50 ರೂ. ಕಡಿತ ಮಾಡಲಾಗಿದೆ. ಚೆನ್ನೈ ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1823.50 ರೂ. ಆಗಿದೆ. ಜೂನ್ ನಲ್ಲಿ ಇದು 1881 ರೂ.ಗೆ ಲಭ್ಯವಿತ್ತು. ಜೂನ್ 2025, ಮೇ 2025, ಏಪ್ರಿಲ್ 2025 ರಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಗಳನ್ನು ಸಹ ಕಡಿಮೆ ಮಾಡಲಾಗಿತ್ತು.

ಜೂನ್ ತಿಂಗಳಲ್ಲಿ 24 ರೂ. ಇಳಿಕೆ ಕಂಡುಬಂದಿದೆ. ಮೇ ತಿಂಗಳಲ್ಲಿ 14.50 ರೂ. ಮತ್ತು ಏಪ್ರಿಲ್ ತಿಂಗಳಲ್ಲಿ 41 ರೂ. ಇಳಿಕೆ ಕಂಡುಬಂದಿದೆ. ಫೆಬ್ರವರಿಯಲ್ಲಿ 7 ರೂ. ಇಳಿಕೆ ಕಂಡುಬಂದಿದೆ, ಆದರೆ ಮಾರ್ಚ್‌ನಲ್ಲಿ 6 ರೂ. ಹೆಚ್ಚಳವಾಗಿದೆ. ಈಗ ಜುಲೈ ತಿಂಗಳಿನಲ್ಲಿಯೂ ದರಗಳನ್ನು ಕಡಿಮೆ ಮಾಡಲಾಗಿದೆ. ಜೂನ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1723.50 ರೂ.ಗೆ ಲಭ್ಯವಿತ್ತು. ಏಪ್ರಿಲ್‌ನಲ್ಲಿ ಇದರ ದರ 1762 ರೂ. ಇತ್ತು. ಮೇ ತಿಂಗಳಲ್ಲಿ ದರ 1747.50 ರೂ. ಇತ್ತು.

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

2 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

3 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

3 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

12 hours ago