ದೇಶ- ವಿದೇಶ

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್ ಪಿಜಿ ದರ ಹೆಚ್ಚಳ ಕಂಡಿದೆ. ಇಂದು ಬರೋಬ್ಬರಿ 29 ರೂಪಾಯಿ ಏರಿಕೆಯಾಗಿದೆ. ಒಟ್ಟಿನಲ್ಲಿ 14.2 ಕೆಜಿ ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ದರ 913 ರಿಂದ 942 ಕ್ಕೆ ಏರಿಕೆ ಆಗಿದೆ. ಈ ದರ ಜೂನ್ 7, ಅಂದರೆ ಇಂದಿನಿಂದಲೇ ಜಾರಿಯಾಗಲಿದೆ.

ಜಾಗತಿಕ ತೈಲ ಹಾಗೂ ಇಂಧನಗಳ ಪೂರೈಕೆಯಲ್ಲಿ ಬಿಕ್ಕಟ್ಟು ಏರ್ಪಟ್ಟಿರುವುದರಿಂದ ಬೆಲೆ ಏರಿಕೆ ಆಗಿದೆ. ಈ ಬೆಲೆ ಏರಿಕೆಯು ನಗರದಿಂದ ನಗರಕ್ಕೆ ಹೊಸ ದರದಲ್ಲಿ ವ್ಯತ್ಯಾಸ ಇರಲಿದೆ. ಈ ಹಿಂದೆ ಮಾರ್ಚ್ 7 ರಂದು ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದ ನಂತರ, ಈಗ ಎರಡನೇ ಬಾರಿಗೆ 29 ರೂ ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳವು ದೇಶೀಯ ಎಲ್ ಪಿಜಿ ಮಾರಾಟದ ಮೇಲಿನ ನಷ್ಟವನ್ನು ಭಾಗಶಃ ಸರಿದೂಗಿಸಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ವಾಣಿಜ್ಯ ಸಿಲಿಂಡರ್ ಅಂತೂ ಈ ಹಿಂದೆಯೇ ಭಾರಿ ಬೆಲೆ ಏರಿಕೆಯಿಂದ ದುಬಾರಿಯಾಗಿದೆ. ಲಭ್ಯತೆ ಕೊರತೆಯಿಂದಲೂ ಅನಧಿಖೃತವಾಗಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿವೆ, ಹೋಟೆಲ್ ಗಳ ತಿಂಡಿ- ಊಟದ ದರವೂ ಗಗನಕ್ಕೆ ಏರಿದೆ. ಹೋಟೆಲ್ ಉದ್ಯಮಿಗಳು ನಷ್ಟ ತಪ್ಪಿಸಲು ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಹಾಕುತ್ತಿದ್ದಾರೆ. ಮದ್ಯಪ್ರಾಚ್ಯ ಬಿಕ್ಕಟ್ಟು ರಿ ಹೊಗುವವರೆಗೂ ಈ ಬೆಲೆ ಏರಿಕೆಯ ಬಿಸಿ ಹೀಗೆ ಮುಂದುವರಿಯುವ ಸಾಧ್ಯತೆ ಇದೆ.
ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಆಮದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಎಲ್ ಪಿಜಿ ಲಭ್ಯತೆಯನ್ನು ಸಮರ್ಪಕವಾಗಿ ಕಾಯ್ದುಕೊಳ್ಳಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ ಗುರುವಾರ ತಿಳಿಸಿದ್ದರು. ಅಲ್ಲದೆ ಗೃಹಬಳಕೆಯ ಸಿಲಿಂಡರ್ ಮೇಲಿನ ಅಂಡರ್ ರಿಕವರಿ ಅಂದರೆ ನಷ್ಟ ಸರಿದೂಗಿಸುವ ಭರ್ತಿ ವೆಚ್ಚ, ಇಂದಿಗೂ ಲ್ರತಿ ಸಿಲಿಂಡರ್ ಗೆ ಸುಮಾರು 700 ರೂಪಾಯಿ ಆಸುಪಾಸಿನಲ್ಲೇ ಇದೆ ಎಂದಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 mins ago

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

15 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

24 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

24 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

24 hours ago