ದೇಶ- ವಿದೇಶ

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್ ಪಿಜಿ ದರ ಹೆಚ್ಚಳ ಕಂಡಿದೆ. ಇಂದು ಬರೋಬ್ಬರಿ 29 ರೂಪಾಯಿ ಏರಿಕೆಯಾಗಿದೆ. ಒಟ್ಟಿನಲ್ಲಿ 14.2 ಕೆಜಿ ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ದರ 913 ರಿಂದ 942 ಕ್ಕೆ ಏರಿಕೆ ಆಗಿದೆ. ಈ ದರ ಜೂನ್ 7, ಅಂದರೆ ಇಂದಿನಿಂದಲೇ ಜಾರಿಯಾಗಲಿದೆ.

ಜಾಗತಿಕ ತೈಲ ಹಾಗೂ ಇಂಧನಗಳ ಪೂರೈಕೆಯಲ್ಲಿ ಬಿಕ್ಕಟ್ಟು ಏರ್ಪಟ್ಟಿರುವುದರಿಂದ ಬೆಲೆ ಏರಿಕೆ ಆಗಿದೆ. ಈ ಬೆಲೆ ಏರಿಕೆಯು ನಗರದಿಂದ ನಗರಕ್ಕೆ ಹೊಸ ದರದಲ್ಲಿ ವ್ಯತ್ಯಾಸ ಇರಲಿದೆ. ಈ ಹಿಂದೆ ಮಾರ್ಚ್ 7 ರಂದು ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದ ನಂತರ, ಈಗ ಎರಡನೇ ಬಾರಿಗೆ 29 ರೂ ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳವು ದೇಶೀಯ ಎಲ್ ಪಿಜಿ ಮಾರಾಟದ ಮೇಲಿನ ನಷ್ಟವನ್ನು ಭಾಗಶಃ ಸರಿದೂಗಿಸಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ವಾಣಿಜ್ಯ ಸಿಲಿಂಡರ್ ಅಂತೂ ಈ ಹಿಂದೆಯೇ ಭಾರಿ ಬೆಲೆ ಏರಿಕೆಯಿಂದ ದುಬಾರಿಯಾಗಿದೆ. ಲಭ್ಯತೆ ಕೊರತೆಯಿಂದಲೂ ಅನಧಿಖೃತವಾಗಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿವೆ, ಹೋಟೆಲ್ ಗಳ ತಿಂಡಿ- ಊಟದ ದರವೂ ಗಗನಕ್ಕೆ ಏರಿದೆ. ಹೋಟೆಲ್ ಉದ್ಯಮಿಗಳು ನಷ್ಟ ತಪ್ಪಿಸಲು ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಹಾಕುತ್ತಿದ್ದಾರೆ. ಮದ್ಯಪ್ರಾಚ್ಯ ಬಿಕ್ಕಟ್ಟು ರಿ ಹೊಗುವವರೆಗೂ ಈ ಬೆಲೆ ಏರಿಕೆಯ ಬಿಸಿ ಹೀಗೆ ಮುಂದುವರಿಯುವ ಸಾಧ್ಯತೆ ಇದೆ.
ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಆಮದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಎಲ್ ಪಿಜಿ ಲಭ್ಯತೆಯನ್ನು ಸಮರ್ಪಕವಾಗಿ ಕಾಯ್ದುಕೊಳ್ಳಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ ಗುರುವಾರ ತಿಳಿಸಿದ್ದರು. ಅಲ್ಲದೆ ಗೃಹಬಳಕೆಯ ಸಿಲಿಂಡರ್ ಮೇಲಿನ ಅಂಡರ್ ರಿಕವರಿ ಅಂದರೆ ನಷ್ಟ ಸರಿದೂಗಿಸುವ ಭರ್ತಿ ವೆಚ್ಚ, ಇಂದಿಗೂ ಲ್ರತಿ ಸಿಲಿಂಡರ್ ಗೆ ಸುಮಾರು 700 ರೂಪಾಯಿ ಆಸುಪಾಸಿನಲ್ಲೇ ಇದೆ ಎಂದಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

9 mins ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

29 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

3 hours ago

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

17 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

17 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

17 hours ago