ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು ಸಿಲಿಂಡರ್ ಖರೀದಿಯಲ್ಲಿ ಸಮರ್ಪಕ ಪೂರೈಕೆ ಇರುವುದಾಗಿ ಬುಧವಾರ ತಿಳಿಸಿದೆ.
ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಮಾಡುವ ವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಕಚ್ಚಾ ತೈಲವನ್ನು ಹೊರ್ಮುಜ್ ಜಲಸಂಧಿ ಬಳಸದ ಮೂಲಗಳಿಂದ ತರಿಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ದೇಶವು ತನ್ನ LPG ಉತ್ಪಾದನೆ ಹೆಚ್ಚಿಸುವ ಮತ್ತು ಮನೆಬಳಕೆಗೆ ಆದ್ಯತೆಯೊಂದಿಗೆ ವಿತರಣೆ ಮಾಡಿಸುವ ಕ್ರಮಗಳನ್ನು ಕೈಗೊಂಡಿದ್ದು, ಆಸ್ಪತ್ರೆಗಳು ಮತ್ತು ಶಾಲೆಗಳಂತಹ ಅಗತ್ಯ ಸೇವೆಗಳಿಗೆ ಸಹ ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕೆಲ ತಪ್ಪು ಮಾಹಿತಿಯ ಕಾರಣದಿಂದಾಗಿ ಕೆಲವರು ಭೀತಿಗೆ ಒಳಗಾಗಿ ಎಲ್ಪಿಜಿ ಸಿಲಿಂಡರ್ ಖರೀದಿಗೆ ಮುಂದಾಗಿದ್ದಾರೆ ಎಂಬುದು ಗೊತ್ತಾಗಿದೆ. ಆದರೆ ಗ್ರಾಹಕರು ಭೀತಿಗೆ ಒಳಗಾಗಿ ಸಿಲಿಂಡರ್ ಬುಕ್ ಮಾಡಬೇಕಾದ ಪರಿಸ್ಥಿತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಭಾರತವು ಸುಮಾರು 40 ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ನಮಗೆ ಪ್ರತಿದಿನ 55 ಲಕ್ಷ ಬ್ಯಾರಲ್ ಕಚ್ಚಾ ತೈಲ ಬೇಕು. ಇದನ್ನು ವಿವಿಧ ಮೂಲಗಳಿಂದ ಪಡೆಯುತ್ತಿದ್ದೇವೆ. ಜೊತೆಗೆ ಹೊರ್ಮುಜ್ ಜಲಸಂಧಿಯ ಮೂಲಕ ಬರಬಹುದಾಗಿದ್ದ ಕಚ್ಚ ತೈಲದ ಪ್ರಮಾಣವೂ ಕೂಡ ಹೆಚ್ಚಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಎಲ್ಎನ್ಜಿ ಹೊತ್ತ ಎರಡು ಹಡಗುಗಳು ಕೆಲವೇ ದಿನಗಳಲ್ಲಿ ಭಾರತ ತಲುಪಲಿವೆ, ಆಗ ದೇಶದಲ್ಲಿ ಇಂಧನ ಪೂರೈಕೆಯು ಇನ್ನಷ್ಟು ಸುಧಾರಿಸಲಿದೆ ಎಂದಿದ್ದಾರೆ.
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…
ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…
ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…