ದೇಶ- ವಿದೇಶ

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ವಿಶ್ವದಲ್ಲಿ ಅತ್ಯಂತ ಕಡಿಮೆ ದರಗಳಲ್ಲೇ ಉಳಿದಿವೆ ಎಂದು ಕೇಂದ್ರ ಸರ್ಕಾರ ಭಾನುವಾರ ಸ್ಪಷ್ಟಪಡಿಸಿದೆ.

14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 29 ಹೆಚ್ಚಿಸಿ, ದಿಲ್ಲಿಯಲ್ಲಿ ಅದರ ಚಿಲ್ಲರೆ ದರವನ್ನು 913ರಿಂದ 942ಕ್ಕೆ ಏರಿಕೆಯಾಗಿದ್ದು ಸರ್ಕಾರ ಈ ಸ್ಪಷ್ಟನೆ ನೀಡಿದೆ.

ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳು ಮೊದಲ ನಾಲ್ಕು ಸಿಲಿಂಡರ್‌ಗಳ ಮರುಪೂರೈಕೆಗೆ ಪ್ರತಿ ಸಿಲಿಂಡರ್‌ಗೆ 300 ರೂಪಾಯಿ ಸಬ್ಸಿಡಿ ಪಡೆಯುವುದರಿಂದ, ಅವರಿಗೆ ಪ್ರತಿ ಸಿಲಿಂಡರ್‌ನ ಪರಿಣಾಮಕಾರಿ ಬೆಲೆ 642 ರೂಪಾಯಿ ಆಗಿಯೇ ಮುಂದುವರಿಯಲಿದೆ.

ಸರ್ಕಾರದ ಪ್ರಕಾರ, ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಜಾಗತಿಕ ಪೂರೈಕೆ ವ್ಯತ್ಯಯಗಳಿಂದಾಗಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಒದಗಿಸುವ ವೆಚ್ಚ 1600 ರೂಪಾಯಿಗೂ ಹೆಚ್ಚು ಏರಿಕೆಯಾಗಿದೆ.

ಸರ್ಕಾರದ ಹೇಳಿಕೆಯಂತೆ, ಫೆಬ್ರವರಿಯಲ್ಲಿ ಟನ್‌ಗೆ ಸುಮಾರು 543 ಡಾಲರ್ ಇದ್ದ ಎಲ್‌ಪಿಜಿ ದರ, ಹಾರ್ಮುಜ್ ಜಲಸಂಧಿಯಲ್ಲಿನ ವ್ಯತ್ಯಯಗಳ ನಂತರ ಏಪ್ರಿಲ್‌ನಲ್ಲಿ ಟನ್‌ಗೆ 775 ಡಾಲರ್ಗೆ ಏರಿತು. ಜೂನ್ ವೇಳೆಗೆ ಅದು ಮತ್ತಷ್ಟು ಏರಿಕೆ ಕಂಡು ಟನ್ಗೆ 790 ಡಾಲರ್ ತಲುಪಿದೆ.

ಸರ್ಕಾರವು, ಭಾರತದಲ್ಲಿ ಅಡುಗೆ ಅನಿಲದ ಬೆಲೆಗಳು ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ ಮತ್ತು ಶ್ರೀಲಂಕಾದಂತಹ ನೆರೆಯ ರಾಷ್ಟ್ರಗಳಿಗಿಂತಲೂ ಕಡಿಮೆಯಿದ್ದು, ಅಮೆರಿಕ, ಆಸ್ಟ್ರೇಲಿಯಾ ಹಾಗೂ ಕೆನಡಾದಂತಹ ಅಭಿವೃದ್ಧಿ ಹೊಂದಿದ ದೇಶಗಳಿಗಿಂತಲೂ ಗಣನೀಯವಾಗಿ ಕಡಿಮೆ ಎಂದು ಕೇಂದ್ರ ಸರ್ಕಾರ ಸಮರ್ಥನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago