ದೇಶ- ವಿದೇಶ

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಟುತ್ತಿರುವ ವರದಿಗಳನ್ನು ನಿರಾಕರಿಸಿದೆ.

ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬುಧವಾರ ಸ್ಪಷ್ಟಪಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಪರಿಷ್ಕೃತ ನಿಯಮಗಳು ಎಂಬ ತಪ್ಪು ವರದಿಗಳನ್ನು ಸರ್ಕಾರ ತಳ್ಳಿಹಾಕಿದೆ.

ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯ, ಸಿಲಿಂಡರ್‌ ರಿಫಿಲಿಂಗ್‌ ಅವಧಿಯನ್ನು 25 ರಿಂದ 35 ದಿನಗಳವರೆಗೆ ಹೆಚ್ಚಿಸಲಾಗಿದೆ ಎಂಬುದು ಸುಳ್ಳು ವರದಿ. ನಗರ ಪ್ರದೇಶಗಳಲ್ಲಿ ಒಂದು ಸಿಲಿಂಡರ್‌ ಖರೀದಿಸಿದ 25 ದಿನಗಳ ನಂತರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳ ನಂತರ ಮತೊಂದು ಸಿಲಿಂಡರ್‌ ಪಡೆಯಬಹುದು ಎಂದು ತಿಳಿಸಿದೆ.

ಇನ್ನೂ ದೇಶದಲ್ಲಿ ಎಲ್‌ಪಿಜಿ ಸಾಕಷ್ಟು ದಾಸ್ತಾನು ಲಭ್ಯವಿದೆ. ಆದ್ದರಿಂದ ಗ್ರಾಹಕರು ಅನಗತ್ಯವಾಗಿ ಅಥವಾ ಭಯಭೀತರಾಗಿ ಸಿಲಿಂಡರ್‌ಗಳನ್ನು ಬುಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವಾಲಯ ಒತ್ತಿ ಹೇಳಿದ್ದು, “ಆತಂಕಕ್ಕೆ ಯಾವುದೇ ಕಾರಣವಿಲ್ಲ. ಸಾಮಾನ್ಯವಾಗಿ ಬುಕಿಂಗ್ ಮಾಡಿ” ಎಂದು ಸಲಹೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

16 mins ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

9 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

9 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

9 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 hours ago