ಪ್ರಯಾಗ್ರಾಜ್: ಮಾಘ ಪೂರ್ಣಿಮೆ ನಿಮಿತ್ತ ಇಂದು ಮಹಾಕುಂಭಮೇಳದಲ್ಲಿ ವಿಶೇಷ ಪುಣ್ಯಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ 73 ಲಕ್ಷಕ್ಕೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗಿನ ಜಾವದಿಂದಲೇ ಪುಣ್ಯಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಪರಿಸ್ಥಿತಿಯನ್ನು ಅವಲೋಕನ ಮಾಡುತ್ತಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅವರು, ಲಖನೌನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿರುವ ವಾರ್ರೂಮ್ನಲ್ಲಿ ಮಾಘ ಹುಣ್ಣಿಮೆ ಸ್ನಾನವನ್ನು ವೀಕ್ಷಣೆ ಮಾಡುತ್ತಿದ್ದು, ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಈ ಮಧ್ಯೆ ಸಿಎಂ ಯೋಗಿ ಆದಿತ್ಯನಾಥ್ ಅವರು, ಜನತೆಗೆ ಮಾಘ ಹುಣ್ಣಿಮೆ ದಿನದ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಮಹಾಕುಂಭಮೇಳದಲ್ಲಿ ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನಕ್ಕೆ ಬಂದಿರುವ ಎಲ್ಲಾ ಸಂತರು, ಧಾರ್ಮಿಕ ಮುಖಂಡರು, ಕಲ್ಪವಾಸಿಗಳು ಮತ್ತು ಭಕ್ತರಿಗೆ ಶುಭಾಶಯಗಳು. ಹರಿಯ ಕೃಪೆಯಿಂದ ಎಲ್ಲರ ಜೀವನವು ಸಂತೋಷ, ಸಮೃದ್ಧಿ ಮತ್ತು ಅದೃಷ್ಟದಿಂದ ತುಂಬಿರಲಿ. ಮಾತೆ ಗಂಗಾ, ಯಮುನಾ ಹಾಗೂ ಸರಸ್ವತಿ ಎಲ್ಲರ ಆಶಯಗಳನ್ನು ಈಡೇರಿಸಲಿ ಎಂದು ಹೇಳಿದ್ದಾರೆ.
ಇನ್ನು ಮಹಾಕುಂಭಮೇಳದಲ್ಲಿ ಒಟ್ಟು 6 ಪುಣ್ಯಸ್ನಾನಗಳ ಪೈಕಿ ಮಾಘ ಹುಣ್ಣಿಮೆಯಂದು ನಡೆಯುವ ಪುಣ್ಯಸ್ನಾನ 5ನೇಯದ್ದಾಗಿದೆ. 6ನೇ ಪುಣ್ಯಸ್ನಾನ ಫೆಬ್ರವರಿ.26ರ ಮಹಾಶಿವರಾತ್ರಿಯಂದು ನಡೆಯಲಿದೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…