ಪ್ರಯಾಗ್ರಾಜ್: ಮಾಘ ಪೂರ್ಣಿಮೆ ನಿಮಿತ್ತ ಇಂದು ಮಹಾಕುಂಭಮೇಳದಲ್ಲಿ ವಿಶೇಷ ಪುಣ್ಯಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ 73 ಲಕ್ಷಕ್ಕೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗಿನ ಜಾವದಿಂದಲೇ ಪುಣ್ಯಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಪರಿಸ್ಥಿತಿಯನ್ನು ಅವಲೋಕನ ಮಾಡುತ್ತಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅವರು, ಲಖನೌನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿರುವ ವಾರ್ರೂಮ್ನಲ್ಲಿ ಮಾಘ ಹುಣ್ಣಿಮೆ ಸ್ನಾನವನ್ನು ವೀಕ್ಷಣೆ ಮಾಡುತ್ತಿದ್ದು, ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಈ ಮಧ್ಯೆ ಸಿಎಂ ಯೋಗಿ ಆದಿತ್ಯನಾಥ್ ಅವರು, ಜನತೆಗೆ ಮಾಘ ಹುಣ್ಣಿಮೆ ದಿನದ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಮಹಾಕುಂಭಮೇಳದಲ್ಲಿ ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನಕ್ಕೆ ಬಂದಿರುವ ಎಲ್ಲಾ ಸಂತರು, ಧಾರ್ಮಿಕ ಮುಖಂಡರು, ಕಲ್ಪವಾಸಿಗಳು ಮತ್ತು ಭಕ್ತರಿಗೆ ಶುಭಾಶಯಗಳು. ಹರಿಯ ಕೃಪೆಯಿಂದ ಎಲ್ಲರ ಜೀವನವು ಸಂತೋಷ, ಸಮೃದ್ಧಿ ಮತ್ತು ಅದೃಷ್ಟದಿಂದ ತುಂಬಿರಲಿ. ಮಾತೆ ಗಂಗಾ, ಯಮುನಾ ಹಾಗೂ ಸರಸ್ವತಿ ಎಲ್ಲರ ಆಶಯಗಳನ್ನು ಈಡೇರಿಸಲಿ ಎಂದು ಹೇಳಿದ್ದಾರೆ.
ಇನ್ನು ಮಹಾಕುಂಭಮೇಳದಲ್ಲಿ ಒಟ್ಟು 6 ಪುಣ್ಯಸ್ನಾನಗಳ ಪೈಕಿ ಮಾಘ ಹುಣ್ಣಿಮೆಯಂದು ನಡೆಯುವ ಪುಣ್ಯಸ್ನಾನ 5ನೇಯದ್ದಾಗಿದೆ. 6ನೇ ಪುಣ್ಯಸ್ನಾನ ಫೆಬ್ರವರಿ.26ರ ಮಹಾಶಿವರಾತ್ರಿಯಂದು ನಡೆಯಲಿದೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…