ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ವೃದ್ಧ ದಲಿತ ದಂಪತಿಗಳ ಮೇಲೆ ಹಲ್ಲೆ ಮಾಡಿ, ಶೂಗಳ ಹಾರ ಹಾಕಿಸಿರುವ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ.
ಮುಂಗೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋರಾ ಹಳ್ಳಿಯಲ್ಲಿ ಶನಿವಾರ ಸಂಜೆ(ಮೇ.18) ಈ ಘಟನೆ ನಡೆದಿದ್ದು, ಈ ಬಗ್ಗೆ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೃದ್ದ ದಂಪತಿಯ ಮಗ ಆರೋಪಿಗಳಲ್ಲಿ ಒಬ್ಬನ ಹೆಂಡತಿಯನ್ನು ಚುಡಾಯಿಸಿದ್ದಾನೆ ಎಂದು ಆರೋಪಿಸಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, 65 ವರ್ಷದ ದಲಿತ ವ್ಯಕ್ತಿ ಮತ್ತು ಆತನ ಹೆಂಡತಿ 60 ವರ್ಷದ ಪತ್ನಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಘಟನೆ ಬಳಿಕ ದಲಿತ ಕುಟುಂಬ ಊರು ತೊರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಶನಿವಾರ(ಮೇ.18) ೧೦ ಮಂದಿ ವಿರುದ್ಧ ಐಪಿಸಿ ಸೆಕ್ಸನ್ ೧೪೭(ಗಲಭೆ) ಹಾಗೂ ಎಸ್ಪಿ, ಎಸ್ಟಿ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…